Advertisement
ಚಿಂತನ

ಸಾಧನೆ ಮತ್ತು ಯಶಸ್ಸು

Share

ಸಾಧನೆ ಎನ್ನುವುದು ಏಕಾಏಕಿ ಸಿಗುವ ಫಲವಲ್ಲ. ನಮಗೆ ಕಾಣುವುದು ಫಲಿತಾಂಶಗಳು ಮಾತ್ರಾ. ಅದರ ಹಿಂದಿನ ಶ್ರಮ ಕಾಣದು. “ಅವನು ಮಾಡಿದ, ನಾನೂ ಮಾಡುವೆ” ಎಂದರೆ ಸಾಧ್ಯವಿಲ್ಲ. ಈ ಸಾಧನೆಯು ಪ್ರತಿದಿನದ ಸಣ್ಣ ಪ್ರಯತ್ನಗಳ, ಸೋಲುಗಳಿಂದ ಕಲಿತ ಪಾಠಗಳು ಮತ್ತು ಕೈ ಬಿಡದ ಮನೋಭಾವದ ಫಲ. ಎಲ್ಲರಿಗೂ ಯಶಸ್ಸು ಒಂದೇ ರೀತಿಯಲ್ಲಿ ಬರುವುದಿಲ್ಲ; ಆದರೆ ಪ್ರಯತ್ನ ಮಾಡುವ ಹಕ್ಕು ಎಲ್ಲರಿಗೂ ಸಮಾನ. ಕೆಲವೊಮ್ಮೆ ನಮ್ಮ ಶ್ರಮಕ್ಕೆ ತಕ್ಷಣ ಫಲ ಸಿಗದಿರಬಹುದು. ಆದರೆ ಆ ಕ್ಷಣಗಳೇ ನಮ್ಮೊಳಗಿನ ಶಕ್ತಿಯನ್ನು ಹೆಚ್ಚುಗೊಳಿಸುತ್ತವೆ. ನಿಂತುಬಿಟ್ಟರೆ ಸಾಧನೆ ಇಲ್ಲ; ನಡೆಯುತ್ತಲೇ ಇದ್ದರೆ ದಾರಿ ತಾನಾಗಿಯೇ ಕಾಣುತ್ತದೆ.

Advertisement
Advertisement

ಭಗವದ್ಗೀತೆ ಹೇಳುವಂತೆ, “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ”  ಅಂದರೆ, ನಿನಗೆ ಹಕ್ಕಿರುವುದು ಕರ್ಮಕ್ಕೆ ಮಾತ್ರ, ಫಲದ ಮೇಲೆ ಅಲ್ಲ. ಫಲದ ಬಗ್ಗೆ ಅತಿಯಾಗಿ ಚಿಂತಿಸದೆ, ಇಂದಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸಿದಾಗ ಯಶಸ್ಸು ತನ್ನ ಸಮಯಕ್ಕೆ ತಾನೇ ಬರುತ್ತದೆ. ಪ್ರತಿದಿನದ ಶ್ರಮವೇ ನಾಳೆಯ ಸಾಧನೆಗೆ ಬೀಜ. ಇಂದು ನಂಬಿಕೆ ಇಟ್ಟು ಮಾಡಿದ ಕೆಲಸವೇ, ನಾಳೆ ಬದುಕಿಗೆ ಹೊಸ ಅರ್ಥ ಕೊಡುತ್ತದೆ. ಅದರ ಜೊತೆಗೇ, ಇನ್ನೊಬ್ಬನ ಸಾಧನೆಗೂ ಅಡ್ಡಿಯಾಗಬೇಡ, ಮರುಗಬೇಡ, ಮತ್ಸರವೂ ಪಡಬೇಡ. ಸಾಧ್ಯವಾದರೆ ಬೆನ್ನುತಟ್ಟು, ಸಾಧನೆಯ ದಾರಿಯನ್ನು ತಿಳಿ, ಅದೂ ಅನುಭವ ಕೊಡುತ್ತದೆ… ಶುಭದಿನ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

8 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

8 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

8 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

8 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

17 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

17 hours ago