Advertisement
ಚಿಂತನ

ಸಾಧನೆ ಮತ್ತು ಯಶಸ್ಸು

Share

ಸಾಧನೆ ಎನ್ನುವುದು ಏಕಾಏಕಿ ಸಿಗುವ ಫಲವಲ್ಲ. ನಮಗೆ ಕಾಣುವುದು ಫಲಿತಾಂಶಗಳು ಮಾತ್ರಾ. ಅದರ ಹಿಂದಿನ ಶ್ರಮ ಕಾಣದು. “ಅವನು ಮಾಡಿದ, ನಾನೂ ಮಾಡುವೆ” ಎಂದರೆ ಸಾಧ್ಯವಿಲ್ಲ. ಈ ಸಾಧನೆಯು ಪ್ರತಿದಿನದ ಸಣ್ಣ ಪ್ರಯತ್ನಗಳ, ಸೋಲುಗಳಿಂದ ಕಲಿತ ಪಾಠಗಳು ಮತ್ತು ಕೈ ಬಿಡದ ಮನೋಭಾವದ ಫಲ. ಎಲ್ಲರಿಗೂ ಯಶಸ್ಸು ಒಂದೇ ರೀತಿಯಲ್ಲಿ ಬರುವುದಿಲ್ಲ; ಆದರೆ ಪ್ರಯತ್ನ ಮಾಡುವ ಹಕ್ಕು ಎಲ್ಲರಿಗೂ ಸಮಾನ. ಕೆಲವೊಮ್ಮೆ ನಮ್ಮ ಶ್ರಮಕ್ಕೆ ತಕ್ಷಣ ಫಲ ಸಿಗದಿರಬಹುದು. ಆದರೆ ಆ ಕ್ಷಣಗಳೇ ನಮ್ಮೊಳಗಿನ ಶಕ್ತಿಯನ್ನು ಹೆಚ್ಚುಗೊಳಿಸುತ್ತವೆ. ನಿಂತುಬಿಟ್ಟರೆ ಸಾಧನೆ ಇಲ್ಲ; ನಡೆಯುತ್ತಲೇ ಇದ್ದರೆ ದಾರಿ ತಾನಾಗಿಯೇ ಕಾಣುತ್ತದೆ.

ಭಗವದ್ಗೀತೆ ಹೇಳುವಂತೆ, “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ”  ಅಂದರೆ, ನಿನಗೆ ಹಕ್ಕಿರುವುದು ಕರ್ಮಕ್ಕೆ ಮಾತ್ರ, ಫಲದ ಮೇಲೆ ಅಲ್ಲ. ಫಲದ ಬಗ್ಗೆ ಅತಿಯಾಗಿ ಚಿಂತಿಸದೆ, ಇಂದಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸಿದಾಗ ಯಶಸ್ಸು ತನ್ನ ಸಮಯಕ್ಕೆ ತಾನೇ ಬರುತ್ತದೆ. ಪ್ರತಿದಿನದ ಶ್ರಮವೇ ನಾಳೆಯ ಸಾಧನೆಗೆ ಬೀಜ. ಇಂದು ನಂಬಿಕೆ ಇಟ್ಟು ಮಾಡಿದ ಕೆಲಸವೇ, ನಾಳೆ ಬದುಕಿಗೆ ಹೊಸ ಅರ್ಥ ಕೊಡುತ್ತದೆ. ಅದರ ಜೊತೆಗೇ, ಇನ್ನೊಬ್ಬನ ಸಾಧನೆಗೂ ಅಡ್ಡಿಯಾಗಬೇಡ, ಮರುಗಬೇಡ, ಮತ್ಸರವೂ ಪಡಬೇಡ. ಸಾಧ್ಯವಾದರೆ ಬೆನ್ನುತಟ್ಟು, ಸಾಧನೆಯ ದಾರಿಯನ್ನು ತಿಳಿ, ಅದೂ ಅನುಭವ ಕೊಡುತ್ತದೆ… ಶುಭದಿನ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago