ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…