ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…