ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…