Advertisement
ಸುದ್ದಿಗಳು

ಎರಡು ಎಕ್ರೆಯಲ್ಲಿ ಸಮಗ್ರ ಕೃಷಿ – ಕೃಷಿಯಲ್ಲಿ ಯಶಸ್ಸು ಕಂಡ ರೈತ

Share

ಕೃಷಿ ಈ ದೇಶದ ಅನ್ನ. ಡಿಗ್ರಿ ಎನ್ನುವುದು ಓದಿನ ಪದವಿ. ಹೀಗಾಗಿ ಪದವಿಯು ಕೃಷಿಯಲ್ಲಿ ಆಧುನಿಕತೆಯನ್ನು, ತಂತ್ರಜ್ಞಾನವನ್ನು ಹೆಚ್ಚಿಸುವ , ಕೃಷಿಯಲ್ಲೂ ಯಶಸ್ಸು ಕಾಣುವ ದಾರಿಗಳಾಗಬೇಕು, ಸ್ವಾವಲಂಬನೆಯ ಮಾರ್ಗಗಳಾಗಬೇಕು. ಇದಕ್ಕೆ ಪೂರಕವಾಗಿ ಇಲ್ಲೊಬ್ಬ ರೈತ ಪಿಎಚ್.ಡಿ ಪದವಿ ಮುಗಿಸಿದರೂ ಬೇರೆ ಕೆಲಸಕ್ಕೆ ಹೋಗದೆ ತನ್ನದೆ 2 ಎಕರೆ ಜಮೀನಿನಲ್ಲಿ ಫಲತ್ತಾದ ಕೃಷಿಯನ್ನು ಮಾಡಿ 2022-23ರಲ್ಲಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ,  2025ನೇ ಸಾಲಿನಲ್ಲಿ ಧಾರವಾಡ ಶ್ರೇಷ್ಠ ಕೃಷಿಕ ಎನ್ನುವ ಪಟ್ಟವನ್ನು ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ ನವಲಗುಂದ ತಾಲೂಕಿನ ನಾಗನೂರ ಗ್ರಾಮದ ಪ್ರಗತಿಪರ ರೈತ ಶೌಕತ್ ಅಲಿ ಲಂಬೂನವರು ತಮ್ಮ 2 ಎಕರೆ ಜಮೀನಿನಲ್ಲಿ ಎರಡು ಮೊಳ ಉದ್ದದ ನುಗ್ಗೆಕಾಯಿ, ಪಪ್ಪಾಯಿ, ಪೇರಳೆ ಹಣ್ಣು, ಚಿಕ್ಕು, ಬದನೆಕಾಯಿ, ಮಾವಿನ ಹಣ್ಣು, ಸೇಬು, ಕಲ್ಲಂಗಡಿ, ಬಾಳೆ, ಕರಿಬೇವು, ಜಂಬೂ ನೇರಳೆ, ಲಿಂಬೆ, ಹಿರೇಕಾಯಿ, ಟೊಮೆಟೊ, ಬೆಂಡಿಕಾಯಿ, ಚವಳಿಕಾಯಿ, ಸೇರಿದಂತೆ ಹಲವಾರು ತರಕಾರಿಗಳನ್ನು ಬೆಳೆಸುವುದರ ಮೂಲಕ ಸಮಗ್ರ ಕೃಷಿ ಮಾಡಿದ್ದಾರೆ. ಕೃಷಿಯಲ್ಲಿ ಲಾಭವನ್ನೂ, ನೆಮ್ಮದಿಯನ್ನೂ ಕಂಡುಕೊಂಡಿದ್ದಾರೆ. ಈಗ ವರ್ಷಕ್ಕೆ 4 ರಿಂದ 5ಲಕ್ಷ ಆದಾಯವನ್ನು ಕೂಡಾ ಗಳಿಸುತ್ತಾರೆ.

ಇಷ್ಟೇ ಅಲ್ಲದೆ, ಇವರು ಬೆಳೆದ ಬೆಳೆ ದೇಶ ವಿದೇಶಕ್ಕೂ ಹೋಗುತ್ತದೆ. ಒಂದು ಕಡೆ ತರಕಾರಿ ಬೆಳೆದರೆ. ಇನ್ನೊಂದು ಕಡೆ ಸೇಬು, ತೆಂಗು, ರೂಜ್ ವೂಡ್, ಅಡಿಕೆ, ಡ್ರಾಗ್ಯನ್, ದಾಳಿಂಬೆ, ಗೋಡಂಬಿ, ಬೆಟ್ಟದ ನೆಲ್ಲಿಕಾಯಿ ಬೆಳೆಸಿದರೆ. ಜೊತೆಗೆ ಕೋಳಿ ಸಾಕಾಣಿಗೆ, ಮೀನು ಸಾಕಾಣಿಕೆ ಕೂಡಾ ಮಾಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago