Advertisement
MIRROR FOCUS

#Chandrayaan3Success | ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ | ಪ್ರಧಾನಿ ಮೋದಿಯಿಂದ ಇಸ್ರೋ ಸಾಧನೆಗೆ ಸಲಾಂ

Share

ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ, ಸಂತಸ ವ್ಯಕ್ತಪಡಿಸಿದ್ದು, ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ #ISRO ವಿಜ್ಞಾನಿಗಳು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

Advertisement
Advertisement
Advertisement
Advertisement

ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕ್ಷಣ ಭಾರತದ ಹೊಸ ವೈಭವ. ಕಷ್ಟಗಳ ಸಾಗರವನ್ನು ದಾಟಿದ ಕ್ಷಣ ಇದಾಗಿದೆ. ಇಂತಹ ಐತಿಹಾಸಿಕ ಕ್ಷಣವನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಜತೆಗೆ, ಇದು ನವ ಭಾರತದ ಸೂರ್ಯೋದಯ ಎಂದು ಬಣ್ಣಿಸಿದರು.

Advertisement

ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ ಎಂದು ಮೋದಿ ಹೇಳಿದರು. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು. ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋ ಮತ್ತು ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಸಹ ಮಾಡಿದ್ದಾರೆ.

ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಲಿಂಕ್ ಮೂಲಕ ಇಸ್ರೋ ವಿಜ್ಞಾನಿಗಳ ಸಂಭ್ರಮಕ್ಕೆ ಜತೆಯಾದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

17 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

17 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

17 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

17 hours ago