Advertisement
MIRROR FOCUS

#Chandrayaan3Success | ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ | ಪ್ರಧಾನಿ ಮೋದಿಯಿಂದ ಇಸ್ರೋ ಸಾಧನೆಗೆ ಸಲಾಂ

Share

ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ, ಸಂತಸ ವ್ಯಕ್ತಪಡಿಸಿದ್ದು, ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ #ISRO ವಿಜ್ಞಾನಿಗಳು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕ್ಷಣ ಭಾರತದ ಹೊಸ ವೈಭವ. ಕಷ್ಟಗಳ ಸಾಗರವನ್ನು ದಾಟಿದ ಕ್ಷಣ ಇದಾಗಿದೆ. ಇಂತಹ ಐತಿಹಾಸಿಕ ಕ್ಷಣವನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಜತೆಗೆ, ಇದು ನವ ಭಾರತದ ಸೂರ್ಯೋದಯ ಎಂದು ಬಣ್ಣಿಸಿದರು.

ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ ಎಂದು ಮೋದಿ ಹೇಳಿದರು. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು. ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋ ಮತ್ತು ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಸಹ ಮಾಡಿದ್ದಾರೆ.

ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಲಿಂಕ್ ಮೂಲಕ ಇಸ್ರೋ ವಿಜ್ಞಾನಿಗಳ ಸಂಭ್ರಮಕ್ಕೆ ಜತೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

19 minutes ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

8 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

18 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

23 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

23 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

23 hours ago