Advertisement
MIRROR FOCUS

#Chandrayaan3Success | ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ | ಪ್ರಧಾನಿ ಮೋದಿಯಿಂದ ಇಸ್ರೋ ಸಾಧನೆಗೆ ಸಲಾಂ

Share

ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ, ಸಂತಸ ವ್ಯಕ್ತಪಡಿಸಿದ್ದು, ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ #ISRO ವಿಜ್ಞಾನಿಗಳು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕ್ಷಣ ಭಾರತದ ಹೊಸ ವೈಭವ. ಕಷ್ಟಗಳ ಸಾಗರವನ್ನು ದಾಟಿದ ಕ್ಷಣ ಇದಾಗಿದೆ. ಇಂತಹ ಐತಿಹಾಸಿಕ ಕ್ಷಣವನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಜತೆಗೆ, ಇದು ನವ ಭಾರತದ ಸೂರ್ಯೋದಯ ಎಂದು ಬಣ್ಣಿಸಿದರು.

ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ ಎಂದು ಮೋದಿ ಹೇಳಿದರು. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು. ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋ ಮತ್ತು ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಸಹ ಮಾಡಿದ್ದಾರೆ.

ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಲಿಂಕ್ ಮೂಲಕ ಇಸ್ರೋ ವಿಜ್ಞಾನಿಗಳ ಸಂಭ್ರಮಕ್ಕೆ ಜತೆಯಾದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago