Advertisement
MIRROR FOCUS

#Chandrayaan3Success | ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ | ಪ್ರಧಾನಿ ಮೋದಿಯಿಂದ ಇಸ್ರೋ ಸಾಧನೆಗೆ ಸಲಾಂ

Share

ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ, ಸಂತಸ ವ್ಯಕ್ತಪಡಿಸಿದ್ದು, ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ #ISRO ವಿಜ್ಞಾನಿಗಳು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

Advertisement

ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕ್ಷಣ ಭಾರತದ ಹೊಸ ವೈಭವ. ಕಷ್ಟಗಳ ಸಾಗರವನ್ನು ದಾಟಿದ ಕ್ಷಣ ಇದಾಗಿದೆ. ಇಂತಹ ಐತಿಹಾಸಿಕ ಕ್ಷಣವನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಜತೆಗೆ, ಇದು ನವ ಭಾರತದ ಸೂರ್ಯೋದಯ ಎಂದು ಬಣ್ಣಿಸಿದರು.

ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ ಎಂದು ಮೋದಿ ಹೇಳಿದರು. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು. ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋ ಮತ್ತು ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಸಹ ಮಾಡಿದ್ದಾರೆ.

ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಲಿಂಕ್ ಮೂಲಕ ಇಸ್ರೋ ವಿಜ್ಞಾನಿಗಳ ಸಂಭ್ರಮಕ್ಕೆ ಜತೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

3 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago