Advertisement
ಅನುಕ್ರಮ

ಹುಟ್ಟು – ಸಾವಿನ ನಡುವಿನ ಬದುಕಿನಲ್ಲಿ ಸಾಧನೆಯ ಶಿಖರ…..

Share
ಹೌದು, ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಸಾವು ಇದ್ದೇ ಇರುತ್ತದೆ. ಸಾವು  ಯಾರನ್ನೂ, ಯಾವತ್ತೂ ಬೇದ-ಬಾವ ಮಾಡುವುದಿಲ್ಲ. ಆದರೆ ಹುಟ್ಟಿ ಯಾರಿಗೂ ಕಾಣದೇ ಸತ್ತು ಹೋಗುವುದಕ್ಕಿಂತ  ಹುಟ್ಟು-ಸಾವಿನ ಮದ್ಯದ ಜೀವನದಲ್ಲಿ ಏನಾದರೊಂದು ಸಾಧಿಸುವುದೇ ನಿಜವಾದ ಜೀವನ.
ಹುಟ್ಟು-ಸಾವಿನ ಮಧ್ಯೆ ಈ ಜಗತ್ತಿನಲ್ಲಿ ನಾವು ನಮ್ಮದೇ ಆದ ಒಂದು 𝐢𝐝𝐞𝐧𝐭𝐢𝐭𝐲 ಕ್ರಿಯೇಟ್ ಮಾಡಬೇಕು.  ಸಾಧನೆಯ ಹಾದಿಯಲ್ಲಿ ಸೋಲು ಮಾಮೂಲಿ, ಒಮ್ಮೆ ಸೋತರೆ ಮತ್ತೊಮ್ಮೆ ಪ್ರಯತ್ನಿಸಬೇಕು, ಮತ್ತೆ ಸೋತರೆ ಇನ್ನೊಮ್ಮೆ ಪ್ರಯತ್ನಿಸಬೇಕು. “ಪ್ರಯತ್ನಂ ಸರ್ವಸಿದ್ದಿ ಸಾಧನಂ” ಎಂಬ ಮಾತಿನಂತೆ ಪ್ರಯತ್ನ ಎಂಬ ಒಂದು ಪದವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇ ಆದಲ್ಲಿ ನಮಗೆ ಗೆಲುವು ಕಟ್ಟಿಟ್ಟ ಬುತ್ತಿ. ನಾವು ನಮ್ಮ ಪ್ರಯತ್ನವನ್ನು ಪ್ರಾಮಾಣಿಕತೆಯಿಂದ ಮಾಡುತ್ತಲೇ ಇದ್ದರೆ ಗೆಲುವು ನಮಗೆ ಒಂದಲ್ಲಾ ಒಂದು ರೂಪದಲ್ಲಿ ದೊರಕಿಯೇ ದೊರಕುತ್ತದೆ.
“ಪ್ರಯತ್ನವನ್ನು ನಂಬು ಅದೃಷ್ಟವನ್ನಲ್ಲ” ಎಂಬ ಮಾತಿನಂತೆ ನಾವು ನಮ್ಮ ಜೀವನದಲ್ಲಿ ಪ್ರಯತ್ನವನ್ನು ನಂಬಬೇಕೇ ಹೊರತು ಪ್ರತೀ ದಿನ ಪ್ರತೀ ಕ್ಷಣ ಅದೃಷ್ಟವನ್ನು ನಂಬಿ ಬದುಕಬಾರದು. ಏಕೆಂದರೆ ಅದೃಷ್ಟ ದೊರಕಬೇಕಾದರೆ ಅಲ್ಲಿ ನಮ್ಮ ಪ್ರಯತ್ನ ಇರಲೇಬೇಕು.
ಗುರಿ ಸಾಧನೆಗಾಗಿ ಹಗಲು ರಾತ್ರಿ ಕಠಿಣ ಪರಿಶ್ರಮ ಪಡಬೇಕು ಹಾಗೂ ಸಾಧನೆಯ ಹಾದಿಯಲ್ಲಿ ಗೆಲುವು ಸಾಧಿಸಬೇಕಾದರೆ ನಾವು ನಮ್ಮ ಜೀವನದಲ್ಲಿ ಕೆಲವನ್ನು ತ್ಯಾಗ ಮಾಡುತ್ತಾ ಹೋಗಬೇಕಾಗುತ್ತದೆ. ಹಾಗೆಂದು ನಾವು ಕಳೆದುಕೊಂಡಿದ್ದೇಲ್ಲಾ ಮತ್ತೆ ಸಿಗುವುದಿಲ್ಲ ಎಂದು ಹೇಳಲಾಗುವುದಿಲ್ಲ. ನಮ್ಮ ಗುರಿಯನ್ನು ನಾವು ತಲುಪಿದ ನಂತರ ನಾವು ಕಳೆದುಕೊಂಡಿದ್ದೇಲ್ಲವೂ ನಮಗೆ ದೊರಕುತ್ತಾ ಹೋಗುತ್ತದೆ. ಆದರೆ ಅದಕ್ಕೆ ಮುಖ್ಯವಾಗಿ ತಾಳ್ಮೆ ಇರಬೇಕು.
ಮುಸ್ಸಂಜೆಯಲ್ಲಿ ಸೂರ್ಯ ತಾನು ಮುಳುಗುವ ಸಮಯದಲ್ಲಿ, ” ನಾ ಕೊಟ್ಟ ಅಮೂಲ್ಯವಾದ ದಿನವನ್ನು ನೀ ಮಣ್ಣು ಮಾಡಿದೆಯಲ್ಲಾ ಮಾನವ”  ಎಂದು ಹೇಳುತ್ತಾನಂತೆ…..”, ಇದರ ಅರ್ಥವೇನೆಂದರೆ ಸಮಯ ಎಂಬುವುದು ನಮ್ಮ ಜೀವನದ ಅತ್ಯಂತ ಅಮೂಲ್ಯವಾದ ಸಂಪತ್ತು. ಹಣ, ಆಸ್ತಿ ಎಲ್ಲವನ್ನೂ ಕಳೆದುಕೊಂಡರೆ ಮತ್ತೆ ಗಳಿಸಬಹುದು. ಆದರೆ ಕಳೆದುಹೋದ ಸಮಯ ಮತ್ತೆ ಎಂದೂ ತಿರುಗಿ ಬರುವುದಿಲ್ಲ. ನಾವು ಈ ಸಮಯವನ್ನು ಮತ್ತೆ ಸಂಪಾದಿಸಲು ಸಾಧ್ಯವಿಲ್ಲ. ಆದ್ದರಿಂದ ಸಿಕ್ಕಿದ ಸಮಯವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡವನು ಜೀವನದಲ್ಲಿ ಗೆದ್ದೇ ಗೆಲ್ಲುತ್ತಾನೆ. ಗೆಲ್ಲೋಣ ಬನ್ನಿ…
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago