Advertisement
ಅಂಕಣ

ಹುಟ್ಟು – ಸಾವಿನ ನಡುವಿನ ಬದುಕಿನಲ್ಲಿ ಸಾಧನೆಯ ಶಿಖರ…..

Share
ಹೌದು, ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಸಾವು ಇದ್ದೇ ಇರುತ್ತದೆ. ಸಾವು  ಯಾರನ್ನೂ, ಯಾವತ್ತೂ ಬೇದ-ಬಾವ ಮಾಡುವುದಿಲ್ಲ. ಆದರೆ ಹುಟ್ಟಿ ಯಾರಿಗೂ ಕಾಣದೇ ಸತ್ತು ಹೋಗುವುದಕ್ಕಿಂತ  ಹುಟ್ಟು-ಸಾವಿನ ಮದ್ಯದ ಜೀವನದಲ್ಲಿ ಏನಾದರೊಂದು ಸಾಧಿಸುವುದೇ ನಿಜವಾದ ಜೀವನ.
ಹುಟ್ಟು-ಸಾವಿನ ಮಧ್ಯೆ ಈ ಜಗತ್ತಿನಲ್ಲಿ ನಾವು ನಮ್ಮದೇ ಆದ ಒಂದು 𝐢𝐝𝐞𝐧𝐭𝐢𝐭𝐲 ಕ್ರಿಯೇಟ್ ಮಾಡಬೇಕು.  ಸಾಧನೆಯ ಹಾದಿಯಲ್ಲಿ ಸೋಲು ಮಾಮೂಲಿ, ಒಮ್ಮೆ ಸೋತರೆ ಮತ್ತೊಮ್ಮೆ ಪ್ರಯತ್ನಿಸಬೇಕು, ಮತ್ತೆ ಸೋತರೆ ಇನ್ನೊಮ್ಮೆ ಪ್ರಯತ್ನಿಸಬೇಕು. “ಪ್ರಯತ್ನಂ ಸರ್ವಸಿದ್ದಿ ಸಾಧನಂ” ಎಂಬ ಮಾತಿನಂತೆ ಪ್ರಯತ್ನ ಎಂಬ ಒಂದು ಪದವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇ ಆದಲ್ಲಿ ನಮಗೆ ಗೆಲುವು ಕಟ್ಟಿಟ್ಟ ಬುತ್ತಿ. ನಾವು ನಮ್ಮ ಪ್ರಯತ್ನವನ್ನು ಪ್ರಾಮಾಣಿಕತೆಯಿಂದ ಮಾಡುತ್ತಲೇ ಇದ್ದರೆ ಗೆಲುವು ನಮಗೆ ಒಂದಲ್ಲಾ ಒಂದು ರೂಪದಲ್ಲಿ ದೊರಕಿಯೇ ದೊರಕುತ್ತದೆ.
“ಪ್ರಯತ್ನವನ್ನು ನಂಬು ಅದೃಷ್ಟವನ್ನಲ್ಲ” ಎಂಬ ಮಾತಿನಂತೆ ನಾವು ನಮ್ಮ ಜೀವನದಲ್ಲಿ ಪ್ರಯತ್ನವನ್ನು ನಂಬಬೇಕೇ ಹೊರತು ಪ್ರತೀ ದಿನ ಪ್ರತೀ ಕ್ಷಣ ಅದೃಷ್ಟವನ್ನು ನಂಬಿ ಬದುಕಬಾರದು. ಏಕೆಂದರೆ ಅದೃಷ್ಟ ದೊರಕಬೇಕಾದರೆ ಅಲ್ಲಿ ನಮ್ಮ ಪ್ರಯತ್ನ ಇರಲೇಬೇಕು.
ಗುರಿ ಸಾಧನೆಗಾಗಿ ಹಗಲು ರಾತ್ರಿ ಕಠಿಣ ಪರಿಶ್ರಮ ಪಡಬೇಕು ಹಾಗೂ ಸಾಧನೆಯ ಹಾದಿಯಲ್ಲಿ ಗೆಲುವು ಸಾಧಿಸಬೇಕಾದರೆ ನಾವು ನಮ್ಮ ಜೀವನದಲ್ಲಿ ಕೆಲವನ್ನು ತ್ಯಾಗ ಮಾಡುತ್ತಾ ಹೋಗಬೇಕಾಗುತ್ತದೆ. ಹಾಗೆಂದು ನಾವು ಕಳೆದುಕೊಂಡಿದ್ದೇಲ್ಲಾ ಮತ್ತೆ ಸಿಗುವುದಿಲ್ಲ ಎಂದು ಹೇಳಲಾಗುವುದಿಲ್ಲ. ನಮ್ಮ ಗುರಿಯನ್ನು ನಾವು ತಲುಪಿದ ನಂತರ ನಾವು ಕಳೆದುಕೊಂಡಿದ್ದೇಲ್ಲವೂ ನಮಗೆ ದೊರಕುತ್ತಾ ಹೋಗುತ್ತದೆ. ಆದರೆ ಅದಕ್ಕೆ ಮುಖ್ಯವಾಗಿ ತಾಳ್ಮೆ ಇರಬೇಕು.
ಮುಸ್ಸಂಜೆಯಲ್ಲಿ ಸೂರ್ಯ ತಾನು ಮುಳುಗುವ ಸಮಯದಲ್ಲಿ, ” ನಾ ಕೊಟ್ಟ ಅಮೂಲ್ಯವಾದ ದಿನವನ್ನು ನೀ ಮಣ್ಣು ಮಾಡಿದೆಯಲ್ಲಾ ಮಾನವ”  ಎಂದು ಹೇಳುತ್ತಾನಂತೆ…..”, ಇದರ ಅರ್ಥವೇನೆಂದರೆ ಸಮಯ ಎಂಬುವುದು ನಮ್ಮ ಜೀವನದ ಅತ್ಯಂತ ಅಮೂಲ್ಯವಾದ ಸಂಪತ್ತು. ಹಣ, ಆಸ್ತಿ ಎಲ್ಲವನ್ನೂ ಕಳೆದುಕೊಂಡರೆ ಮತ್ತೆ ಗಳಿಸಬಹುದು. ಆದರೆ ಕಳೆದುಹೋದ ಸಮಯ ಮತ್ತೆ ಎಂದೂ ತಿರುಗಿ ಬರುವುದಿಲ್ಲ. ನಾವು ಈ ಸಮಯವನ್ನು ಮತ್ತೆ ಸಂಪಾದಿಸಲು ಸಾಧ್ಯವಿಲ್ಲ. ಆದ್ದರಿಂದ ಸಿಕ್ಕಿದ ಸಮಯವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡವನು ಜೀವನದಲ್ಲಿ ಗೆದ್ದೇ ಗೆಲ್ಲುತ್ತಾನೆ. ಗೆಲ್ಲೋಣ ಬನ್ನಿ…
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

8 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

9 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

13 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

13 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

17 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago