ಹೀಗೊಂದು ಗೃಹ ಉದ್ದಿಮೆ | ಸೂರ್ಯನ ಬೆಳಕಿಂದ ಚಕ್ಕುಲಿ ತಯಾರಿಸಿ | ಉತ್ತಮ ಆದಾಯ ಗಳಿಸಿ…!

March 14, 2023
1:29 PM

ಅನೇಕ ಮಹಿಳೆಯರು ಕುರುಕುಲು ತಿಂಡಿ ಚಕ್ಕುಲಿ, ನಿಪ್ಪಟ್ಟು, ಕಾರಕಡ್ಡಿ ಮುಂತಾದವು ಮಾಡಿ, ಮಾರಿ ಜೀವನ ಸಾಗಿಸುತ್ತಾರೆ. ಈ ಕುರುಕುಲು ತಿಂಡಿ ತಿನಿಸುಗಳನ್ನು ಮಾಡೋದೇನೋ ಸರಿ. ಆದರೆ ಈ ಬೇಸಗೆಯ ಬಿಸಿಲಿನ ತಾಪಕ್ಕೆ ಒಲೆಯ ಮುಂದೆ ಬೇಯೋದು ಯಾರು..? ಆದರೆ ವಿಧಿ ಇಲ್ಲ.. ಜೀವನ ಸಾಗಬೇಕಲ್ಲ.. ಆದ್ರೆ ಈ ತಾಪತ್ರಯಗಳಿಗೆ ಈಗೊಂದು ಸುಲಭ ದಾರಿ ಸಿಕ್ಕಿದೆ.

Advertisement
Advertisement

ಸೂರ್ಯನ ಬೆಳಕಿನಿಂದ ಈಗ ಚಕ್ಕುಲಿಯನ್ನೂ ತಯಾರಿಸಬಹುದು.  ಹೌದು, ಸೂರ್ಯನ ಬೆಳಕಿನಿಂದ ಚಕ್ಕುಲಿ ತಯಾರಿಸುವ ವಿಶೇಷ ಸಾಧನವೊಂದನ್ನು ಆವಿಷ್ಕಾರ ಮಾಡಲಾಗಿದೆ. ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿರುವ ಸೆಲ್ಕೋ ಸಂಸ್ಥೆ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಕಂಡುಹಿಡಿದೆ. ಈ ಚಕ್ಕುಲಿ ಮೇಕರ್​ನ್ನು ಇತ್ತೀಚಿಗೆ ಉಡುಪಿಯಲ್ಲಿ ನಡೆದ ಕೃಷಿ ಮೇಳದಲ್ಲಿ ಪ್ರದರ್ಶನ ಮಾಡಲಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಬಳಸಿ ಒಂದೇ ಗಂಟೆಯಲ್ಲಿ 10 ಕೆಜಿ ಚಕ್ಕುಲಿಯನ್ನು ತಯಾರಿಸಬಹುದಾಗಿದೆ. ಚಕ್ಕುಲಿಯೊಂದೇ ಅಲ್ಲದೇ, ಕೋಡುಬಳೆ ಮತ್ತಿತರ ತಿಂಡಿಗಳನ್ನು ಸಹ ಈ ಸಾಧನ ಬಳಸಿ ತಯಾರಿಸಬಹುದಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಆದರೂ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಸಂಶೋಧನೆ ಮತ್ತು ಅಭಿವೃದ್ಧಿಯ ಅಂತಿಮ ಹಂತದಲ್ಲಿದ್ದೇವೆ ಎಂದು ಸೆಲ್ಕೋ ಸಂಸ್ಥೆ ತಿಳಿಸಿದೆ.

Advertisement

ಸೋಲಾರ್ ಚಕ್ಕುಲಿ ಮೇಕರ್ ಯಂತ್ರವನ್ನು ಬ್ಲೂಟೂತ್ ಮೂಲಕ ಮೊಬೈಲ್ ಫೋನ್​ಗೆ ಸಂಪರ್ಕಿಸಬಹುದು. ಚಕ್ಕುಲಿ ತಯಾರಿಸುವಾಗ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಚಕ್ಕುಲಿ ಹಿಟ್ಟಿನ ಪ್ರಮಾಣ, ಗಾತ್ರ ಮತ್ತು ದಪ್ಪ ಮುಂತಾದವುಗಳನ್ನು ನಿರ್ಧರಿಸಬಹುದು ಎಂದು ಸೆಲ್ಕೋ ಪ್ರತಿನಿಧಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಯುವಕ ಯುವತಿಯರ ಜೀವನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಸೋಲಾರ್ ಚಕ್ಕುಲಿ ಮೇಕರ್ ತಯಾರಿಸಲಾಗಿದೆ. ಈ ಯಂತ್ರ ಹಳ್ಳಿಗಳಲ್ಲಿ ಹೊಸ ವ್ಯವಹಾರಕ್ಕೆ ಕೈಹಾಕುವ ಉತ್ಸಾಹಿಗಳಿಗೆ ನೆರವಾಗಲಿದೆ ಎನ್ನಲಾಗಿದೆ.

ಅಂದಾಜು 2.5 ಲಕ್ಷ ರೂ. ಬೆಲೆಯ ಈ ಚಕ್ಕುಲಿ ಮೇಕರ್ ಯಂತ್ರಕ್ಕೆ ಸೆಲ್ಕೋ ಶೇ.25ರಷ್ಟು ಸಬ್ಸಿಡಿ ನೀಡುವುದಾಗಿ ತಿಳಿಸಿದೆ. ಒಟ್ಟಾರೆ ಈ ಯಂತ್ರದ ಮೂಲಕ ಗ್ರಾಮೀಣ ಭಾಗದ ಉತ್ಸಾಹಿಗಳಿಗೆ ಈ ಸೋಲಾರ್ ಯಂತ್ರ ಹೊಸ ಬ್ಯುಸಿನೆಸ್ ಆರಂಬಿಸಲು ದಾರಿಯಾಗುವ ಲಕ್ಷಣವಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?
May 24, 2025
9:13 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group