Advertisement
ಸುದ್ದಿಗಳು

ಹೀಗೊಂದು ಗೃಹ ಉದ್ದಿಮೆ | ಸೂರ್ಯನ ಬೆಳಕಿಂದ ಚಕ್ಕುಲಿ ತಯಾರಿಸಿ | ಉತ್ತಮ ಆದಾಯ ಗಳಿಸಿ…!

Share

ಅನೇಕ ಮಹಿಳೆಯರು ಕುರುಕುಲು ತಿಂಡಿ ಚಕ್ಕುಲಿ, ನಿಪ್ಪಟ್ಟು, ಕಾರಕಡ್ಡಿ ಮುಂತಾದವು ಮಾಡಿ, ಮಾರಿ ಜೀವನ ಸಾಗಿಸುತ್ತಾರೆ. ಈ ಕುರುಕುಲು ತಿಂಡಿ ತಿನಿಸುಗಳನ್ನು ಮಾಡೋದೇನೋ ಸರಿ. ಆದರೆ ಈ ಬೇಸಗೆಯ ಬಿಸಿಲಿನ ತಾಪಕ್ಕೆ ಒಲೆಯ ಮುಂದೆ ಬೇಯೋದು ಯಾರು..? ಆದರೆ ವಿಧಿ ಇಲ್ಲ.. ಜೀವನ ಸಾಗಬೇಕಲ್ಲ.. ಆದ್ರೆ ಈ ತಾಪತ್ರಯಗಳಿಗೆ ಈಗೊಂದು ಸುಲಭ ದಾರಿ ಸಿಕ್ಕಿದೆ.

ಸೂರ್ಯನ ಬೆಳಕಿನಿಂದ ಈಗ ಚಕ್ಕುಲಿಯನ್ನೂ ತಯಾರಿಸಬಹುದು.  ಹೌದು, ಸೂರ್ಯನ ಬೆಳಕಿನಿಂದ ಚಕ್ಕುಲಿ ತಯಾರಿಸುವ ವಿಶೇಷ ಸಾಧನವೊಂದನ್ನು ಆವಿಷ್ಕಾರ ಮಾಡಲಾಗಿದೆ. ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿರುವ ಸೆಲ್ಕೋ ಸಂಸ್ಥೆ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಕಂಡುಹಿಡಿದೆ. ಈ ಚಕ್ಕುಲಿ ಮೇಕರ್​ನ್ನು ಇತ್ತೀಚಿಗೆ ಉಡುಪಿಯಲ್ಲಿ ನಡೆದ ಕೃಷಿ ಮೇಳದಲ್ಲಿ ಪ್ರದರ್ಶನ ಮಾಡಲಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಬಳಸಿ ಒಂದೇ ಗಂಟೆಯಲ್ಲಿ 10 ಕೆಜಿ ಚಕ್ಕುಲಿಯನ್ನು ತಯಾರಿಸಬಹುದಾಗಿದೆ. ಚಕ್ಕುಲಿಯೊಂದೇ ಅಲ್ಲದೇ, ಕೋಡುಬಳೆ ಮತ್ತಿತರ ತಿಂಡಿಗಳನ್ನು ಸಹ ಈ ಸಾಧನ ಬಳಸಿ ತಯಾರಿಸಬಹುದಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಆದರೂ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಸಂಶೋಧನೆ ಮತ್ತು ಅಭಿವೃದ್ಧಿಯ ಅಂತಿಮ ಹಂತದಲ್ಲಿದ್ದೇವೆ ಎಂದು ಸೆಲ್ಕೋ ಸಂಸ್ಥೆ ತಿಳಿಸಿದೆ.

Advertisement

ಸೋಲಾರ್ ಚಕ್ಕುಲಿ ಮೇಕರ್ ಯಂತ್ರವನ್ನು ಬ್ಲೂಟೂತ್ ಮೂಲಕ ಮೊಬೈಲ್ ಫೋನ್​ಗೆ ಸಂಪರ್ಕಿಸಬಹುದು. ಚಕ್ಕುಲಿ ತಯಾರಿಸುವಾಗ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಚಕ್ಕುಲಿ ಹಿಟ್ಟಿನ ಪ್ರಮಾಣ, ಗಾತ್ರ ಮತ್ತು ದಪ್ಪ ಮುಂತಾದವುಗಳನ್ನು ನಿರ್ಧರಿಸಬಹುದು ಎಂದು ಸೆಲ್ಕೋ ಪ್ರತಿನಿಧಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಯುವಕ ಯುವತಿಯರ ಜೀವನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಸೋಲಾರ್ ಚಕ್ಕುಲಿ ಮೇಕರ್ ತಯಾರಿಸಲಾಗಿದೆ. ಈ ಯಂತ್ರ ಹಳ್ಳಿಗಳಲ್ಲಿ ಹೊಸ ವ್ಯವಹಾರಕ್ಕೆ ಕೈಹಾಕುವ ಉತ್ಸಾಹಿಗಳಿಗೆ ನೆರವಾಗಲಿದೆ ಎನ್ನಲಾಗಿದೆ.

ಅಂದಾಜು 2.5 ಲಕ್ಷ ರೂ. ಬೆಲೆಯ ಈ ಚಕ್ಕುಲಿ ಮೇಕರ್ ಯಂತ್ರಕ್ಕೆ ಸೆಲ್ಕೋ ಶೇ.25ರಷ್ಟು ಸಬ್ಸಿಡಿ ನೀಡುವುದಾಗಿ ತಿಳಿಸಿದೆ. ಒಟ್ಟಾರೆ ಈ ಯಂತ್ರದ ಮೂಲಕ ಗ್ರಾಮೀಣ ಭಾಗದ ಉತ್ಸಾಹಿಗಳಿಗೆ ಈ ಸೋಲಾರ್ ಯಂತ್ರ ಹೊಸ ಬ್ಯುಸಿನೆಸ್ ಆರಂಬಿಸಲು ದಾರಿಯಾಗುವ ಲಕ್ಷಣವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರ ಬದುಕು ಉಳಿಸಲು ಭಾರತದಲ್ಲಿ ಹವಾಮಾನ–ಸ್ಥಿತಿಸ್ಥಾಪಕ ಕೃಷಿ ಅನಿವಾರ್ಯ

ಹವಾಮಾನ ಬದಲಾವಣೆಯಿಂದ ಬೆಳೆ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ…

1 hour ago

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ

ರಾಷ್ಟ್ರೀಯ ರೈತ ದಿನಾಚರಣೆಯನ್ನು ದಕ್ಷಿಣ ಕನ್ನಡದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕೃಷಿ ಸಚಿವ ಎನ್.…

2 hours ago

ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್

ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್…

2 hours ago

ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ

ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…

2 hours ago

ಸೌರ ಪಂಪ್‌ಗಳ ಬಳಕೆಯಿಂದ ರೈತರ ಆದಾಯ ದ್ವಿಗುಣ

ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ…

2 hours ago

ಬಟಾಟೆಯಂತೆ ಅಡಿಕೆಗೆ ವಿಕಿರಣ ಬಳಕೆ ಸಾಧ್ಯವೇ? ಹೇಗೆ ಬಳಸಬಹುದು?

ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…

2 hours ago