Advertisement
ಸುದ್ದಿಗಳು

ಹೀಗೊಂದು ಗೃಹ ಉದ್ದಿಮೆ | ಸೂರ್ಯನ ಬೆಳಕಿಂದ ಚಕ್ಕುಲಿ ತಯಾರಿಸಿ | ಉತ್ತಮ ಆದಾಯ ಗಳಿಸಿ…!

Share

ಅನೇಕ ಮಹಿಳೆಯರು ಕುರುಕುಲು ತಿಂಡಿ ಚಕ್ಕುಲಿ, ನಿಪ್ಪಟ್ಟು, ಕಾರಕಡ್ಡಿ ಮುಂತಾದವು ಮಾಡಿ, ಮಾರಿ ಜೀವನ ಸಾಗಿಸುತ್ತಾರೆ. ಈ ಕುರುಕುಲು ತಿಂಡಿ ತಿನಿಸುಗಳನ್ನು ಮಾಡೋದೇನೋ ಸರಿ. ಆದರೆ ಈ ಬೇಸಗೆಯ ಬಿಸಿಲಿನ ತಾಪಕ್ಕೆ ಒಲೆಯ ಮುಂದೆ ಬೇಯೋದು ಯಾರು..? ಆದರೆ ವಿಧಿ ಇಲ್ಲ.. ಜೀವನ ಸಾಗಬೇಕಲ್ಲ.. ಆದ್ರೆ ಈ ತಾಪತ್ರಯಗಳಿಗೆ ಈಗೊಂದು ಸುಲಭ ದಾರಿ ಸಿಕ್ಕಿದೆ.

ಸೂರ್ಯನ ಬೆಳಕಿನಿಂದ ಈಗ ಚಕ್ಕುಲಿಯನ್ನೂ ತಯಾರಿಸಬಹುದು.  ಹೌದು, ಸೂರ್ಯನ ಬೆಳಕಿನಿಂದ ಚಕ್ಕುಲಿ ತಯಾರಿಸುವ ವಿಶೇಷ ಸಾಧನವೊಂದನ್ನು ಆವಿಷ್ಕಾರ ಮಾಡಲಾಗಿದೆ. ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿರುವ ಸೆಲ್ಕೋ ಸಂಸ್ಥೆ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಕಂಡುಹಿಡಿದೆ. ಈ ಚಕ್ಕುಲಿ ಮೇಕರ್​ನ್ನು ಇತ್ತೀಚಿಗೆ ಉಡುಪಿಯಲ್ಲಿ ನಡೆದ ಕೃಷಿ ಮೇಳದಲ್ಲಿ ಪ್ರದರ್ಶನ ಮಾಡಲಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಬಳಸಿ ಒಂದೇ ಗಂಟೆಯಲ್ಲಿ 10 ಕೆಜಿ ಚಕ್ಕುಲಿಯನ್ನು ತಯಾರಿಸಬಹುದಾಗಿದೆ. ಚಕ್ಕುಲಿಯೊಂದೇ ಅಲ್ಲದೇ, ಕೋಡುಬಳೆ ಮತ್ತಿತರ ತಿಂಡಿಗಳನ್ನು ಸಹ ಈ ಸಾಧನ ಬಳಸಿ ತಯಾರಿಸಬಹುದಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಆದರೂ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಸಂಶೋಧನೆ ಮತ್ತು ಅಭಿವೃದ್ಧಿಯ ಅಂತಿಮ ಹಂತದಲ್ಲಿದ್ದೇವೆ ಎಂದು ಸೆಲ್ಕೋ ಸಂಸ್ಥೆ ತಿಳಿಸಿದೆ.

ಸೋಲಾರ್ ಚಕ್ಕುಲಿ ಮೇಕರ್ ಯಂತ್ರವನ್ನು ಬ್ಲೂಟೂತ್ ಮೂಲಕ ಮೊಬೈಲ್ ಫೋನ್​ಗೆ ಸಂಪರ್ಕಿಸಬಹುದು. ಚಕ್ಕುಲಿ ತಯಾರಿಸುವಾಗ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಚಕ್ಕುಲಿ ಹಿಟ್ಟಿನ ಪ್ರಮಾಣ, ಗಾತ್ರ ಮತ್ತು ದಪ್ಪ ಮುಂತಾದವುಗಳನ್ನು ನಿರ್ಧರಿಸಬಹುದು ಎಂದು ಸೆಲ್ಕೋ ಪ್ರತಿನಿಧಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಯುವಕ ಯುವತಿಯರ ಜೀವನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಸೋಲಾರ್ ಚಕ್ಕುಲಿ ಮೇಕರ್ ತಯಾರಿಸಲಾಗಿದೆ. ಈ ಯಂತ್ರ ಹಳ್ಳಿಗಳಲ್ಲಿ ಹೊಸ ವ್ಯವಹಾರಕ್ಕೆ ಕೈಹಾಕುವ ಉತ್ಸಾಹಿಗಳಿಗೆ ನೆರವಾಗಲಿದೆ ಎನ್ನಲಾಗಿದೆ.

ಅಂದಾಜು 2.5 ಲಕ್ಷ ರೂ. ಬೆಲೆಯ ಈ ಚಕ್ಕುಲಿ ಮೇಕರ್ ಯಂತ್ರಕ್ಕೆ ಸೆಲ್ಕೋ ಶೇ.25ರಷ್ಟು ಸಬ್ಸಿಡಿ ನೀಡುವುದಾಗಿ ತಿಳಿಸಿದೆ. ಒಟ್ಟಾರೆ ಈ ಯಂತ್ರದ ಮೂಲಕ ಗ್ರಾಮೀಣ ಭಾಗದ ಉತ್ಸಾಹಿಗಳಿಗೆ ಈ ಸೋಲಾರ್ ಯಂತ್ರ ಹೊಸ ಬ್ಯುಸಿನೆಸ್ ಆರಂಬಿಸಲು ದಾರಿಯಾಗುವ ಲಕ್ಷಣವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

3 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

4 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

16 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

17 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

17 hours ago