Advertisement
ಸುದ್ದಿಗಳು

ಹೀಗೊಂದು ಗೃಹ ಉದ್ದಿಮೆ | ಸೂರ್ಯನ ಬೆಳಕಿಂದ ಚಕ್ಕುಲಿ ತಯಾರಿಸಿ | ಉತ್ತಮ ಆದಾಯ ಗಳಿಸಿ…!

Share

ಅನೇಕ ಮಹಿಳೆಯರು ಕುರುಕುಲು ತಿಂಡಿ ಚಕ್ಕುಲಿ, ನಿಪ್ಪಟ್ಟು, ಕಾರಕಡ್ಡಿ ಮುಂತಾದವು ಮಾಡಿ, ಮಾರಿ ಜೀವನ ಸಾಗಿಸುತ್ತಾರೆ. ಈ ಕುರುಕುಲು ತಿಂಡಿ ತಿನಿಸುಗಳನ್ನು ಮಾಡೋದೇನೋ ಸರಿ. ಆದರೆ ಈ ಬೇಸಗೆಯ ಬಿಸಿಲಿನ ತಾಪಕ್ಕೆ ಒಲೆಯ ಮುಂದೆ ಬೇಯೋದು ಯಾರು..? ಆದರೆ ವಿಧಿ ಇಲ್ಲ.. ಜೀವನ ಸಾಗಬೇಕಲ್ಲ.. ಆದ್ರೆ ಈ ತಾಪತ್ರಯಗಳಿಗೆ ಈಗೊಂದು ಸುಲಭ ದಾರಿ ಸಿಕ್ಕಿದೆ.

ಸೂರ್ಯನ ಬೆಳಕಿನಿಂದ ಈಗ ಚಕ್ಕುಲಿಯನ್ನೂ ತಯಾರಿಸಬಹುದು.  ಹೌದು, ಸೂರ್ಯನ ಬೆಳಕಿನಿಂದ ಚಕ್ಕುಲಿ ತಯಾರಿಸುವ ವಿಶೇಷ ಸಾಧನವೊಂದನ್ನು ಆವಿಷ್ಕಾರ ಮಾಡಲಾಗಿದೆ. ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿರುವ ಸೆಲ್ಕೋ ಸಂಸ್ಥೆ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಕಂಡುಹಿಡಿದೆ. ಈ ಚಕ್ಕುಲಿ ಮೇಕರ್​ನ್ನು ಇತ್ತೀಚಿಗೆ ಉಡುಪಿಯಲ್ಲಿ ನಡೆದ ಕೃಷಿ ಮೇಳದಲ್ಲಿ ಪ್ರದರ್ಶನ ಮಾಡಲಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಬಳಸಿ ಒಂದೇ ಗಂಟೆಯಲ್ಲಿ 10 ಕೆಜಿ ಚಕ್ಕುಲಿಯನ್ನು ತಯಾರಿಸಬಹುದಾಗಿದೆ. ಚಕ್ಕುಲಿಯೊಂದೇ ಅಲ್ಲದೇ, ಕೋಡುಬಳೆ ಮತ್ತಿತರ ತಿಂಡಿಗಳನ್ನು ಸಹ ಈ ಸಾಧನ ಬಳಸಿ ತಯಾರಿಸಬಹುದಾಗಿದೆ.

ಈ ಸೋಲಾರ್ ಚಕ್ಕುಲಿ ಮೇಕರ್ ಸಾಧನವನ್ನು ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಆದರೂ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಸಂಶೋಧನೆ ಮತ್ತು ಅಭಿವೃದ್ಧಿಯ ಅಂತಿಮ ಹಂತದಲ್ಲಿದ್ದೇವೆ ಎಂದು ಸೆಲ್ಕೋ ಸಂಸ್ಥೆ ತಿಳಿಸಿದೆ.

ಸೋಲಾರ್ ಚಕ್ಕುಲಿ ಮೇಕರ್ ಯಂತ್ರವನ್ನು ಬ್ಲೂಟೂತ್ ಮೂಲಕ ಮೊಬೈಲ್ ಫೋನ್​ಗೆ ಸಂಪರ್ಕಿಸಬಹುದು. ಚಕ್ಕುಲಿ ತಯಾರಿಸುವಾಗ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಚಕ್ಕುಲಿ ಹಿಟ್ಟಿನ ಪ್ರಮಾಣ, ಗಾತ್ರ ಮತ್ತು ದಪ್ಪ ಮುಂತಾದವುಗಳನ್ನು ನಿರ್ಧರಿಸಬಹುದು ಎಂದು ಸೆಲ್ಕೋ ಪ್ರತಿನಿಧಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಯುವಕ ಯುವತಿಯರ ಜೀವನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಸೋಲಾರ್ ಚಕ್ಕುಲಿ ಮೇಕರ್ ತಯಾರಿಸಲಾಗಿದೆ. ಈ ಯಂತ್ರ ಹಳ್ಳಿಗಳಲ್ಲಿ ಹೊಸ ವ್ಯವಹಾರಕ್ಕೆ ಕೈಹಾಕುವ ಉತ್ಸಾಹಿಗಳಿಗೆ ನೆರವಾಗಲಿದೆ ಎನ್ನಲಾಗಿದೆ.

ಅಂದಾಜು 2.5 ಲಕ್ಷ ರೂ. ಬೆಲೆಯ ಈ ಚಕ್ಕುಲಿ ಮೇಕರ್ ಯಂತ್ರಕ್ಕೆ ಸೆಲ್ಕೋ ಶೇ.25ರಷ್ಟು ಸಬ್ಸಿಡಿ ನೀಡುವುದಾಗಿ ತಿಳಿಸಿದೆ. ಒಟ್ಟಾರೆ ಈ ಯಂತ್ರದ ಮೂಲಕ ಗ್ರಾಮೀಣ ಭಾಗದ ಉತ್ಸಾಹಿಗಳಿಗೆ ಈ ಸೋಲಾರ್ ಯಂತ್ರ ಹೊಸ ಬ್ಯುಸಿನೆಸ್ ಆರಂಬಿಸಲು ದಾರಿಯಾಗುವ ಲಕ್ಷಣವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

7 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

20 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago