Advertisement
Opinion

ಸಕ್ಕರೆ, ಬೆಲ್ಲ, ಜೇನುತುಪ್ಪ ಅಥವಾ ಕಂದು ಸಕ್ಕರೆ | ಯಾವ ಆಹಾರವು ನಿಮಗೆ ಸೂಕ್ತವಾಗಿದೆ? | ತಜ್ಞರ ಅಭಿಪ್ರಾಯ ಹೀಗಿದೆ….

Share

ನಮ್ಮಲ್ಲಿ ಹೆಚ್ಚಿನವರು ತಮ್ಮ ಬೆಳಗಿನ ದಿನಚರಿಯನ್ನು ಒಂದು ಕಪ್ ಚಹಾ(Tea), ಕಾಫಿ(Coffee)ಯೊಂದಿಗೆ ಪ್ರಾರಂಭಿಸುತ್ತಾರೆ. ಇದರಲ್ಲಿ ಸಕ್ಕರೆಯನ್ನು(Sugar) ಬಳಸುವುದರಿಂದ ಬೆಳಗ್ಗೆ ಎದ್ದ ಕೂಡಲೇ ಕುಡಿಯಬೇಕೋ ಬೇಡವೋ ಎಂಬ ಗೊಂದಲವಿದೆ. ಅನೇಕರು ಆರೋಗ್ಯ ಪ್ರಜ್ಞೆಯನ್ನು (Health conscious) ಹೊಂದಿದ್ದಾರೆ ಮತ್ತು ಈ ಬಗ್ಗೆ ಬಹಳ ಜಾಗರೂಕರಾಗಿದ್ದಾರೆ. ಸಕ್ಕರೆ ಸೇವನೆಯು ನಮ್ಮ ಒಟ್ಟಾರೆ ಆರೋಗ್ಯಕ್ಕೆ ವಿಶೇಷವಾಗಿ ಮಧುಮೇಹಿಗಳಿಗೆ(Diabetes) ಅಪಾಯಕಾರಿ(Danger) ಎಂದು ಪರಿಗಣಿಸಲಾಗಿದೆ. ಆದರೆ, ಈಗ ಸಕ್ಕರೆಗೆ ಪರ್ಯಾಯವಾಗಿ ಬೆಲ್ಲ(jaggery), ಜೇನು(Honey) ಮತ್ತು ಬ್ರೌನ್ ಶುಗರ್(Brown sugar) ಇವೆ. ಆದರೆ, ಈ ವಿಧಗಳಲ್ಲಿ ಯಾವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು….?

Advertisement
Advertisement

ಈ ಆಹಾರಗಳಲ್ಲಿ ಒಂದನ್ನು ಸಕ್ಕರೆ ಬದಲಿಯಾಗಿ ಆಯ್ಕೆಮಾಡುವ ಮೊದಲು, ಒಂದು ವಿಷಯವನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಅಂದರೆ, ಈ ಎಲ್ಲಾ ರೀತಿಯ ಸಿಹಿತಿಂಡಿಗಳು ಹೆಚ್ಚು ಕಡಿಮೆ ಒಂದೇ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಅದರ ಪೌಷ್ಠಿಕಾಂಶದ ಸಂಯೋಜನೆ ಮತ್ತು ಪ್ರಕ್ರಿಯೆಗಳು ಸ್ವಲ್ಪ ವಿಭಿನ್ನವಾಗಿವೆ. ತಜ್ಞರು ಅದೇ ಹೇಳುತ್ತಾರೆ. ಸಕ್ಕರೆ, ಕಂದು ಸಕ್ಕರೆ, ಬೆಲ್ಲ ಎಲ್ಲವನ್ನೂ ಕಬ್ಬಿನಿಂದ ತಯಾರಿಸಲಾಗುತ್ತದೆ ಎಂದು ಪ್ರತಿಯೊಬ್ಬರೂ ತಿಳಿದಿರಬೇಕು. ಆದರೆ, ಇವುಗಳಲ್ಲಿ ನಿಮಗೆ ಯಾವುದು ಹಿತ? ಇದರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕತಜ್ಞ ಗರಿಮಾ ಗೋಯಲ್ ಹೇಳಿದ್ದಾರೆ.

ಸಕ್ಕರೆಯೂ ಕಬ್ಬಿನ ರಸವನ್ನು ಸಂಪೂರ್ಣವಾಗಿ ಸಂಸ್ಕರಿಸಿ ತಯಾರಿಸಲಾದ ಅಂತಿಮ ಉತ್ಪನ್ನವಾಗಿದೆ. ಬ್ರೌನ್ ಶುಗರ್ ಅನ್ನು ಕೂಡ ಸಂಸ್ಕರಿಸಲಾಗುತ್ತದೆ, ಆದರೆ ಕಾಕಂಬಿಯನ್ನು ಬೇರ್ಪಡಿಸಲಾಗುತ್ತದೆ, ಆದರೆ ಕಾಕಂಬಿಯನ್ನು ನಂತರ ಸೇರಿಸಲಾಗುತ್ತದೆ. ಸಕ್ಕರೆಗೂ ಬ್ರೌನ್ ವಿಶೇಷ ವ್ಯತ್ಯಾಸವಿಲ್ಲ. ಕ್ಯಾಲೋರಿಗಳ ಕುರಿತು ಮಾತನಾಡಿದ ಪೌಷ್ಟಿಕತಜ್ಞ ಗರಿಮಾ ಗೋಯಲ್, ನೀವು ಒಂದು ಚಮಚ ಸಕ್ಕರೆ, ಬ್ರೌನ್ ಶುಗರ್ ಅಥವಾ ಬೆಲ್ಲವನ್ನು ತೆಗೆದುಕೊಂಡರೂ, ಈ ಮೂರು ಆಹಾರಗಳು ಬಹುತೇಕ ಒಂದೇ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ.

ಸಕ್ಕರೆಯು ಅತಿಯಾಗಿ ಸಂಸ್ಕರಿಸಿದ ಪದಾರ್ಥವಾಗಿದೆ. ಇದರಲ್ಲಿ ಸಕ್ಕರೆ (ಗ್ಲುಕೋಸ್) ಹೊರತು ಇನ್ನಾವ ಪೌಷ್ಟಿಕಾಂಶ ಇರುವುದಿಲ್ಲ. ಮೇಲಾಗಿ, ಸಕ್ಕರೆಯನ್ನು ತಯಾರಿಸಲು ಅನೇಕ ರಾಸಾಯನಿಕ ಪ್ರಕ್ರಿಯೆಗಳನ್ನು ಮಾಡುತ್ತಾರೆ. ಈ ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಿರುತ್ತವೆ. ಸಾವಯವ ಪದ್ಧತಿಯಿಂದ ತಯಾರಿಸಿದ ಬೆಲ್ಲವು ಸಕ್ಕರೆಗಿಂತ ಎಷ್ಟೋ ಪಾಲು ಉತ್ತಮ. ಅದರಲ್ಲಿ, ಕ್ಯಾಲೋರಿಗಳು ಸಕ್ಕರೆಯಂತೆ ಇರಬಹುದು. ಆದರೆ, ಇತರ ಖನಿಜಾಂಶಗಳು ಮತ್ತು ಪೋಷಕಾಂಶಗಳು ಇರುವುದರಿಂದ ಬೆಲ್ಲವು ಆರೋಗ್ಯಕ್ಕೆ ಕೆಲವು ಲಾಭಗಳನ್ನು ನೀಡುತ್ತದೆ. ಬೆಲ್ಲವು ಸಕ್ಕರೆಗಿಂತ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿರುತ್ತದೆ. ತಾಳೆ ಬೆಲ್ಲವು (ಪಾಮ್ ಜಾಗರಿ) ಕಬ್ಬಿನ ಬೆಲ್ಲಕ್ಕಿಂತಲೂ ಹೆಚ್ಚು ಪ್ರಯೋಜನಕಾರಿಯಾಗಿದೆ.

ಶುದ್ಧ ಜೇನನ್ನು ಸಹ ಸಿಹಿಕಾರಕವಾಗಿ ಬಳಸಬಹುದು. ಇದು ಸಕ್ಕರೆ ಮತ್ತು ಬೆಲ್ಲಗಳಿಗಿಂತಲೂ ಒಳ್ಳೆಯ ಪರ್ಯಾಯವಾಗಿದೆ. ಏಕೆಂದರೆ, ಇದು ಹೂವುಗಳ ಮಕರಂದದಿಂದ ತಯಾರಾಗುತ್ತದೆ. ಇದರಲ್ಲಿ, ಪೋಷಕಾಂಶಗಳ ಪ್ರಮಾಣ ಹೆಚ್ಚು ಇರುತ್ತದೆ ಮತ್ತು ಇತರ ಕೆಲವು ಪೋಷಕಾಂಶಗಳು ಹಾಗೂ ಕಿಣ್ವಗಳು ಇರುವುದರಿಂದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ.

ಪರ್ಯಾಯವಾಗಿ ನೀವು ಖರ್ಜೂರ ಅಥವಾ ಖರ್ಜೂರದ ರಸವನ್ನು ಸಿಹಿಕಾರಕವಾಗಿ ಬಳಸಬಹುದು. ಇದರಲ್ಲಿ ಗ್ಲುಕೋಸ್ ಗಿಂತಲೂ ಫ್ರುಕ್ಟೋಜ್ ಪ್ರಮಾಣ ಹೆಚ್ಚಾಗಿ ಇರುವುದರಿಂದ ಇದು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುವುದಿಲ್ಲ. ಆದ್ದರಿಂದ, ಮಧುಮೇಹಿಗಳಿಗೆ ಉಪಯುಕ್ತವಾಗಿದೆ. ಆದರೆ, ಅತಿಯಾದ ಫ್ರುಕ್ಟೋಸ್ ಸೇವನೆ ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು. ಸಕ್ಕರೆ ಆಹಾರಗಳ ಅತಿಯಾದ ಸೇವನೆಯು ದೇಹದಲ್ಲಿ ಹೆಚ್ಚುವರಿ ಕ್ಯಾಲೊರಿಗಳನ್ನು ಉಂಟುಮಾಡುತ್ತದೆ ಮತ್ತು ತೂಕ ಮತ್ತು ಕೊಬ್ಬನ್ನು ಹೆಚ್ಚಿಸುತ್ತದೆ. ಸಕ್ಕರೆ ತುಂಬಾ ಸಿಹಿಯಾಗಿರುವುದರಿಂದ ಇದು ಕ್ಯಾರಮೆಲ್ ರುಚಿಯನ್ನು ನೀಡಲು ಸಾಧ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳಿದರು. ನೀವು ಈ ಸಿಹಿ ಆಹಾರಗಳಲ್ಲಿ ಯಾವುದನ್ನೂ ಅತಿಯಾಗಿ ಬಳಸುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಹಾರದ ಬಗ್ಗೆ ಗಮನ ಹರಿಸುವುದು ಮುಖ್ಯ ಎಂದು ಡಯೆಟಿಷಿಯನ್‌ಗಳು ಹೇಳಿತ್ತಾರೆ.

ಸಂಕಲನೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

12 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

13 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

13 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

13 hours ago