ಕಬ್ಬು ಬೆಳೆಗಾರರ ಸಮಸ್ಯೆ | ವಾರದಲ್ಲಿ ಕಬ್ಬಿಗೆ ದರ ನಿಗದಿ ಭರವಸೆ ನೀಡಿದ ಸಚಿವರು |

October 21, 2022
9:24 AM

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಕಬ್ಬಿಗೆ ದರ ನಿಗದಿ ಮಾಡಲಾಗುವುದು  ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.

ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಉತ್ತಮ ದರ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸಿ ಸೂಕ್ತ ದರ ಲಭ್ಯವಾಗುವಂತೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದರು.

ಕಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು  ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದರು. ಇದೆಲ್ಲದರ ನಡುವೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು ವಾರದಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು  ಎಂದು ಸಚಿವರು ಭರವಸೆ ನೀಡಿದ್ದಾರೆ.

ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಹಣ ಪಾವತಿ ಮಾಡದೆ ಸಕ್ಕರೆ ಕಾರ್ಖಾನೆ ತೆರೆಯವಾರದು ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು.

ಈ ನಡುವೆ ಸಚಿವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಬ್ಬು ಬೆಳೆಗಾರರ ಸಂಘದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು.ಮುಂದೆ ಇಲಾಖೆಯ ಬಗ್ಗೆ ಯಾವುದೇ ದೂರುಗಳಿದ್ದರೆ ಕಾಲ್‌ ಸೆಂಟರ್‌ ಮೂಲಕ ತಿಳಿಸಬಹುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror