ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಉತ್ತಮ ದರ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸಿ ಸೂಕ್ತ ದರ ಲಭ್ಯವಾಗುವಂತೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದರು.
ಕಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದರು. ಇದೆಲ್ಲದರ ನಡುವೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು ವಾರದಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಹಣ ಪಾವತಿ ಮಾಡದೆ ಸಕ್ಕರೆ ಕಾರ್ಖಾನೆ ತೆರೆಯವಾರದು ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಸಚಿವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಬ್ಬು ಬೆಳೆಗಾರರ ಸಂಘದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು.ಮುಂದೆ ಇಲಾಖೆಯ ಬಗ್ಗೆ ಯಾವುದೇ ದೂರುಗಳಿದ್ದರೆ ಕಾಲ್ ಸೆಂಟರ್ ಮೂಲಕ ತಿಳಿಸಬಹುದು ಎಂದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…