ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಉತ್ತಮ ದರ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸಿ ಸೂಕ್ತ ದರ ಲಭ್ಯವಾಗುವಂತೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದರು.
ಕಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದರು. ಇದೆಲ್ಲದರ ನಡುವೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು ವಾರದಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಹಣ ಪಾವತಿ ಮಾಡದೆ ಸಕ್ಕರೆ ಕಾರ್ಖಾನೆ ತೆರೆಯವಾರದು ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಸಚಿವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಬ್ಬು ಬೆಳೆಗಾರರ ಸಂಘದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು.ಮುಂದೆ ಇಲಾಖೆಯ ಬಗ್ಗೆ ಯಾವುದೇ ದೂರುಗಳಿದ್ದರೆ ಕಾಲ್ ಸೆಂಟರ್ ಮೂಲಕ ತಿಳಿಸಬಹುದು ಎಂದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…