ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಉತ್ತಮ ದರ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸಿ ಸೂಕ್ತ ದರ ಲಭ್ಯವಾಗುವಂತೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದರು.
ಕಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದರು. ಇದೆಲ್ಲದರ ನಡುವೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು ವಾರದಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಹಣ ಪಾವತಿ ಮಾಡದೆ ಸಕ್ಕರೆ ಕಾರ್ಖಾನೆ ತೆರೆಯವಾರದು ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಸಚಿವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಬ್ಬು ಬೆಳೆಗಾರರ ಸಂಘದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು.ಮುಂದೆ ಇಲಾಖೆಯ ಬಗ್ಗೆ ಯಾವುದೇ ದೂರುಗಳಿದ್ದರೆ ಕಾಲ್ ಸೆಂಟರ್ ಮೂಲಕ ತಿಳಿಸಬಹುದು ಎಂದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…