ರೈತರ ಕಬ್ಬಿನ ಬಾಕಿ ಬಿಲ್ ಶೇಕಡಾ 99 ರಷ್ಟು ಪಾವತಿ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಕಬ್ಬು ನುರಿಸುವ ಹಂಗಾಮು ನವೆಂಬರ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಬೆಳಗಾವಿಯಲ್ಲಿ ಹೇಳಿದ್ದಾರೆ.…..ಮುಂದೆ ಓದಿ….
ಈಗಾಗಲೇ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ 22 ಸಾವಿರ ಕೋಟಿ ರೂಪಾಯಿ ಪೈಕಿ 20 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಶೇಕಡ 99ರಷ್ಟು ಬಿಲ್ ಪಾವತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೆಲ ಸಕ್ಕರೆ ಕಾರ್ಖಾನೆಗಳ ಉತ್ಪಾದಿತ ಸಕ್ಕರೆ ಮಾರಾಟವನ್ನು ತಾಂತ್ರಿಕ ಕಾರಣದಿಂದ ತಡೆಹಿಡಿಯಲಾಗಿದ್ದು, ಇದೀಗ ಅಂತಹ ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಈಗ ಬಾಕಿ ಇರುವ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು. ನಷ್ಟದಲ್ಲಿರುವ ಸರ್ಕಾರಿ ಸಕ್ಕರೆ ಕಾರ್ಖಾನೆಗಳನ್ನು ಗುತ್ತಿಗೆ ನೀಡಲಾಗಿದ್ದು, ಇದೀಗ ಅವುಗಳು ಲಾಭದಲ್ಲಿವೆ, ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…