Advertisement
MIRROR FOCUS

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

Share

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ  ಬಿ. ನಂದೀಶ್ ಹೇಳುತ್ತಾರೆ.

ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್‌ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ   ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

8 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

18 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

18 hours ago