ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ ಬಿ. ನಂದೀಶ್ ಹೇಳುತ್ತಾರೆ.
ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…