Advertisement
MIRROR FOCUS

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

Share

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು,  ಕಳೆದ ಸಾಲಿನಲ್ಲಿ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಿಲ್ಲ್ಲ ಎಂದು ರೈತರು ದೂರುಗಳನ್ನು ಸಲ್ಲಿಸಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ್ದಾರೆ.  ಸಕ್ಕರೆ ಆಯುಕ್ತರು ನೀಡುವ ದಿನಾಂಕದಂದು ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.  ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಗೆ ನಿಗದಿಪಡಿಸಿರುವ ಕಬ್ಬನ್ನು ಮಾತ್ರ ಕಟಾವು ಮಾಡಲು ಅವಕಾಶವಿರುತ್ತದೆ. ಇದನ್ನು ಮನದಟ್ಟು ಮಾಡಿಕೊಂಡು ಕಾರ್ಖಾನೆಗಳಲ್ಲಿ ಸಣ್ಣ ಪುಟ್ಟ ಆಂತರಿಕ ತೊಂದರೆಗಳಿದ್ದಲ್ಲಿ ಈಗಲೇ ಸರಿಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.  ಮೈ ಶುಗರ್ ಸಕ್ಕರೆ ಕಾರ್ಖಾನೆಯು 4 ಲಕ್ಷದ 20 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ.  ಪ್ರತಿ ದಿನ 4000ಮೆಟ್ರಿಕ್ ಟನ್ ಕಬ್ಬು ನುರಿಸುವ ಸಾಮರ್ಥ್ಯವಿದೆ ಎಂದು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

9 minutes ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

20 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

21 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago