ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಇದ್ದರೆ ಬಾಂಡ್ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರಿಂದ ಹಣ ಪಡೆಯುವಂತೆ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆ ಸಭೆಯಲ್ಲಿ ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಂಡ್ ಮೂಲಕ ಹಣ ಸಂಗ್ರಹಿಸಿ ಮೂರು ವರ್ಷದಲ್ಲಿ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ಎಥೆನಾಲ್ ನೀತಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಅನುಕೂಲವಾಗಿದೆ. ಆದರೆ ನ್ಯೂನ್ಯತೆ ಸರಿಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಎಥೆನಾಲ್ ಲಾಭಾಂಶ ಕಬ್ಬು ಬೆಳೆಗಾರರಿಗೂ ಸಿಗದೆ, ಪೆಟ್ರೋಲ್ ಬಳಸುವ ಗ್ರಾಹಕರಿಗೂ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರೋತ್ಸಾಹ ನೀಡಬೇಕು ಎಂದು ಸದನದಲ್ಲಿ ಒತ್ತಾಯಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…