ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ-ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ.
ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ತಾಳೇವಾಡಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ಸಿದ್ಧವಿದ್ದು, ಅರಣ್ಯವಾಸಿಗಳು ಸ್ವಯಂ ಪ್ರೇರಿತವಾಗಿ ಸ್ಥಳಾಂತರಕ್ಕೆ ಸಮ್ಮತಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತುತ ಭೀಮಗಢ ದಟ್ಟಾರಣ್ಯದೊಳಗೆ ಒಟ್ಟು 13 ಜನವಸತಿಗಳಲ್ಲಿ 745 ಕುಟುಂಬಗಳಿದ್ದು, 3045 ಜನರು ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪೂರ್ಣ ಗ್ರಾಮದ ಜನರು ಸ್ಥಳಾಂತರಕ್ಕೆ ಸಮ್ಮತಿಸಿದರೆ, ಅಂತಹ ಗ್ರಾಮಗಳ ಜನರಿಗೆ ಪುನರ್ವಸತಿ ಪರಿಹಾರ ನೀಡಿ, ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…