Advertisement
ವಿಶೇಷ ವರದಿಗಳು

ಸುಳ್ಯ ಬಿಜೆಪಿಯೊಳಗೆ ಇದೇನಿದು ಮುಗಿಯದ ಗೊಂದಲ…! | ಬಿಜೆಪಿಯ ಸಂಘಟನೆಯ ತವರು ನೆಲದಲ್ಲಿ ಹೆಚ್ಚುತ್ತಿರುವ ಬಂಡಾಯದ ಬಾವುಟ ..? |

Share

ಬಿಜೆಪಿಯ, ಸಂಘಪರಿವಾರದ ಸಂಘಟನೆಯ ಗಟ್ಟಿ ನೆಲದಲ್ಲಿ  ಕಳೆದ ಒಂದೆರಡು ವರ್ಷಗಳಿಂದ ಬಂಡಾಯ ಬಾವುಟ ಹೆಚ್ಚಾಗಿದೆ. ಇದೀಗ ಚುನಾವಣೆಯಲ್ಲಿ ಸ್ಫರ್ಧಿಸುವವರೆಗೆ ತಲುಪಿದೆ. ಗ್ರಾಮ ಪಂಚಾಯತ್‌, ಸಹಕಾರಿ ಸಂಘಗಳ ಚುನಾವಣೆಯವರೆಗೆ ತಲುಪಿ ನಿಧಾನವಾಗಿ ಈ ಮನಸ್ಥಿತಿ ವಿಸ್ತರಣೆಯಾಗುತ್ತಿದೆ. ಈಗ ಇದೊಂದು ಚರ್ಚೆಯ ವಿಷಯವಾಗಿದೆ.

Advertisement

ಇಡೀ ರಾಜ್ಯದಲ್ಲಿ  ಸಂಘ ಪರಿವಾರ ಹಾಗೂ ಬಿಜೆಪಿ ಸಂಘಟನೆಗೆ ಸುಳ್ಯವನ್ನು ನೋಡಿ ಎನ್ನುತ್ತಿದ್ದ ಕಾಲ ಇತ್ತು. ಸುಮಾರು  25  ವರ್ಷಗಳಿಂದಲೂ ಇದೇ ವಾತಾವರಣ ಕಂಡುಬಂದಿತ್ತು. ಅದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ  ಎಲ್ಲಾ ಶಾಸಕ  ಸ್ಥಾನಗಳನ್ನೂ ಕಳೆದುಕೊಂಡ ಬಿಜೆಪಿ ಸುಳ್ಯವನ್ನು ಬಿಟ್ಟುಕೊಟ್ಟಿರಲಿಲ್ಲ.ಇದಕ್ಕೆ ಕಾರಣ ಇಲ್ಲಿನ ಸಂಘಟನೆ ಎಂದೇ ವಿಶ್ಲೇಷಣೆ ಮಾಡಲಾಗಿತ್ತು.

ಆದರೆ ಈಚೆಗೆ ಒಂದೆರಡು ವರ್ಷಗಳಿಂದ ಸುಳ್ಯದಲ್ಲಿಯೇ ಬಿಜೆಪಿ ಹಾಗೂ ಸಂಘಪರಿವಾರದಲ್ಲಿ ಬಂಡಾಯ ಹೆಚ್ಚಾಗುತ್ತಿದೆ ಮಾತ್ರವಲ್ಲ ಚುನಾವಣೆಯಲ್ಲಿ ಬಂಡಾಯದ ಗೆಲುವೂ ಆಗುತ್ತಿದೆ. ಇದು ಈಗ ಚರ್ಚೆಯ ವಿಷಯವಾಗಿದೆ. ಈ ಸಂಘಟನೆ ಹೀಗಾದದ್ದು ಏಕೆ ? ಪರ್ಯಾಯ ರಾಜಕೀಯ ಶಕ್ತಿ ಇಲ್ಲಿ ಸದ್ದಿಲ್ಲದೆ ಬಲಗೊಳ್ಳುತ್ತಿರುವುದು  ಹೇಗೆ ?

ಸುಳ್ಯದಲ್ಲಿ ಡಿಸಿಸಿ ಬ್ಯಾಂಕ್‌ ಚುನಾವಣೆಯವರೆಗೆ ಸಂಘಟನೆ ಪ್ರಶ್ನಾತೀತವಾಗಿ ಬೆಳೆಯುತ್ತಲೇ ಇತ್ತು. ಡಿಸಿಸಿ ಬ್ಯಾಂಕ್‌ ಚುನಾವಣೆಯ ನಂತರ ಅಡ್ಡಮತದಾನದ ಪರಿಣಾಮವಾಗಿ ಬಿಜೆಪಿ ಹಾಗೂ ಸಂಘಪರಿವಾರ, ಸಹಕಾರ ಭಾರತಿಯಲ್ಲಿ ಸುಳ್ಯದಲ್ಲಿ ಆರಂಭವಾದ ಗೊಂದಲ ನಿವಾರಣೆ ಆಗಿಲ್ಲ.

ಯಾವುದೇ ಪಕ್ಷ , ಸಂಘಟನೆ ಪ್ರಜಾಪ್ರಭುತ್ವದ ಆಧಾರದಲ್ಲಿ ಇದ್ದರೆ ಪಕ್ಷದೊಳಗಿನ ಬಿಕ್ಕಟ್ಟಿಗೆ ಉಪಸಮಿತಿಗಳನ್ನು ಮಾಡಿಕೊಂಡು ಸಮಸ್ಯೆ ಪರಿಹಾರ ಮಾಡುತ್ತವೆ. ಆದರೆ ಸುಳ್ಯದಲ್ಲಿ ಪ್ರಸಿದ್ಧ ದೈವಸ್ಥಾನವಾದ ಕಾನತ್ತೂರು ಕ್ಷೇತ್ರಕ್ಕೆ ತೆರಳಿ ಮತದಾನ ಮಾಡಿದವರಿಂದ ಪ್ರಮಾಣ ಮಾಡಿಸಲಾಗಿತ್ತು. ಇಲ್ಲಿಂದ ಆರಂಭವಾದ ಗೊಂದಲಗಳಿಂದ ಸಂಘಟನೆಯ ಗಟ್ಟಿತನ ಕಳೆದುಕೊಳ್ಳಲು ಆರಂಭಿಸಿತು. ಇದು ಪಂಚಾಯತ್‌ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯಲ್ಲೂ ಪರಿಣಾಮ ಬೀರಿತು. ಈ ಬಾರಿಯ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಕೂಡಾ ಬಿಜೆಪಿ ಬೆಂಬಲಿತರು ಅಧಿಕ ಸ್ಥಾನ ಪಡೆದರೂ  ಬಿಜೆಪಿಗೆ   ಶೇಕಡಾವಾರು ಮತಗಳು ಕಡಿಮೆಯಾಗಿದ್ದವು. ಇದೀಗ ಸಹಕಾರಿ ಸಂಘಗಳ ಚುನಾವಣೆಗಳೂ ಅದೇ ದಾರಿ ಹಿಡಿಯಲಾರಂಭಿಸಿದೆ.

ಎರಡು ದಿನಗಳ ಹಿಂದೆ ನಡೆದ ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲೂ ಅದೇ ಬೆಳವಣಿಗೆ ನಡೆಯಿತು. ಸಚಿವ ಅಂಗಾರ ಅವರ ತವರು ಕ್ಷೇತ್ರದ, ಬಿಜೆಪಿ ಮಂಡಲ ಅಧ್ಯಕ್ಷರ ಸಹಕಾರಿ ಸಂಘದಲ್ಲಿ ಈ ಪರಿಸ್ಥಿತಿ ನಡೆದಿರುವುದು  ಇನ್ನೊಂದು ಗಮನಾರ್ಹ ಸಂಗತಿ ಇದಾಗಿದೆ.

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ  13 ಸ್ಥಾನಗಳಲ್ಲಿ   10  ಸ್ಥಾನಗಳನ್ನು ಸಹಕಾರಿ ಬಳಗದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಕೇವಲ 3 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಪಡೆದುಕೊಂಡಿತ್ತು. ಇದರಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರ ವಿರುದ್ಧ ಸ್ಫರ್ಧೆ ಮಾಡದೆ ಅದೊಂದು ಸ್ಥಾನವನ್ನು ಬಂಡಾಯದ ಗುಂಪು ಬಿಜೆಪಿ-ಸಹಕಾರ ಭಾರತಿಗೆ ಬಿಟ್ಟುಕೊಡುವ ಮೂಲಕ ಬಿಜೆಪಿ-ಸಹಕಾರ ಭಾರತಿಯ ತೀವ್ರ ಮುಖಭಂಗವನ್ನು ತಪ್ಪಿಸಿದೆ.

ಸಂಘಟನೆಗಳು ಬಲವಾದಂತೆ ನಾಯಕರು ಹೆಚ್ಚಾಗುತ್ತಾರೆ. ಹೆಚ್ಚಿನ ಮಂದಿ ಪಕ್ಷದೊಳಗೆ ತೂರಿಕೊಳ್ಳುತ್ತಾರೆ. ಸುಳ್ಯದ ಬಿಜೆಪಿಯಲ್ಲೂ ನಾಯಕರಿಗೆ ಕೊರತೆ ಇಲ್ಲ. ಆದರೆ ಸಮರ್ಥರು ಯಾರು, ಭ್ರಷ್ಟಾಚಾರ ರಹಿತರು ಯಾರು ? ಸರ್ವ ಸಮ್ಮತ ನಾಯಕ ಯಾರು ಎಂಬುದನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಹಾಗೂ ಸಂಘಪರಿವಾರ ಈಚೆಗೆ ಸೋಲುತ್ತಿದೆ. ಹೀಗಾಗಿ ರಾಜ್ಯ , ಜಿಲ್ಲಾ ಮಟ್ಟದ ನಾಯಕರು ಕೂಡಾ ಗ್ರಾಮದ ಸಹಕಾರಿ ಸಂಘಗಳಿಗೆ, ಗ್ರಾಮ ಪಂಚಾಯತ್‌ ಚುನಾವಣೆಗಳಿಗೆ ಸ್ಫರ್ಧೆ ಮಾಡುತ್ತಿದ್ದಾರೆ. ಹೊಸ ನಾಯಕರನ್ನು , ಯುವಕರನ್ನು ಬೆಳೆಸುವುದು  ಹಾಗೂ ಅವಕಾಶ ನೀಡುವುದು  ಕಡಿಮೆಯಾಗಿದೆ. ಹೀಗಾಗಿ ಒಳಗೊಳಗಿನ ಅಸಮಾಧಾನಗಳಿಂದ ಸಂಘಟನೆ ಶಿಥಿಲಗೊಳ್ಳಲು ಕಾರಣವಾಗುತ್ತಿದೆ ಎನ್ನುವುದು  ಸಂಘಪರಿವಾರದ ಮೂಲಗಳಿಂದ ಲಭ್ಯವಾಗುವ ಮಾಹಿತಿ.

ಇದೆಲ್ಲಾ ಬೆಳವಣಿಗೆಗಳು ಕಳೆದ ಹಲವು ಸಮಯಗಳಿಂದ ನಡೆಯುತ್ತಿದ್ದರೂ ಕ್ಷೇತ್ರದ ಶಾಸಕರು, ಈಗಿನ ಸಚಿವರೂ ಮೌನವಾಗಿದ್ದರು ಎನ್ನುವುದು ಇನ್ನೊಂದು ಗಮನಾರ್ಹವಾದ ಸಂಗತಿ. ಎಲ್ಲಾ ಗೊಂದಲಗಳ ನಿವಾರಣೆಗೆ ಮುಂಚೂಣಿಯಲ್ಲಿ ನಿಲ್ಲುವ ಸಂಘಪರಿವಾರವೂ ಇಲ್ಲಿ ಮೌನವಹಿಸಿರುವುದು  ಮೇಲ್ನೋಟಕ್ಕೆ ಕಾಣುತ್ತದೆ. ಹೀಗಾಗಿಯೇ ಸಂಘಟನೆಯ ಗಟ್ಟಿ ನೆಲದಲ್ಲಿ ಬದಲಾವಣೆಯ ಗಾಳಿ ಕಂಡುಬಂದಿದೆ. ಮಾದರಿ ಎನ್ನುವ ಕ್ಷೇತ್ರದಲ್ಲಿಯೇ ಗೊಂದಲಗಳು ಹೆಚ್ಚಾಗಿದೆ.

ಇಷ್ಟೆಲ್ಲಾ ಗೊಂದಲಗಳು ಇದ್ದರೂ ಮತದಾರರು ಮಾತ್ರ ಯಾವುದಕ್ಕೂ ಸೊಪ್ಪು ಹಾಕದೆ ತಮಗೆ ಯಾರು ಬೇಕೋ ಅವರಿಗೆ ಮತ ನೀಡಿ ಗೆಲ್ಲಿಸುತ್ತಿದ್ದಾರೆ. ಆದರೆ ಪಕ್ಷದೊಳಗಿನ ಗೊಂದಲಗಳು ಇಡೀ ಕ್ಷೇತ್ರದ ಜನರ ಮೇಲೂ ಸಣ್ಣ ರೀತಿಯ ಪರಿಣಾಮ ಬೀರುತ್ತವೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ಕಡಿಮೆಯಾಗುತ್ತದೆ, ಪರಸ್ಪರ ಚರ್ಚೆಯ ಕಾರಣದಿಂದ ಎಲ್ಲಾ ಕಡೆಗಳಲ್ಲೂ ಯೋಜನೆಗಳು ವೈಫಲ್ಯ ಕಾಣುತ್ತವೆ. ಕ್ರಮೇಣ ಬದಲಾವಣೆಯ ಕಡೆಗೆ ಮತದಾರರೇ ಒಲವು ತೋರಿದರೂ ಅಚ್ಚರಿ ಇಲ್ಲ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

60 minutes ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago