ಸುದ್ದಿಗಳು

ಸುಳ್ಯಕ್ಕೆ ಶುಭ ಸುದ್ದಿ | ವಿದ್ಯುತ್‌ ಸಮಸ್ಯೆ ನಿವಾರಣೆಗೆ ದಿಟ್ಟ ಹೆಜ್ಜೆ | ಬಹುಕಾಲದ ಬೇಡಿಕೆಗೆ ಶಂಕುಸ್ಥಾಪನೆ | |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯದ ಜನತೆಗೆ ಶುಭ ಸುದ್ದಿ ಕೇಳಿಬಂದಿದೆ. ಸುಳ್ಯದ ಜನರ ಬಹುಕಾಲದ ಬೇಡಿಕೆಯಾಗಿದ್ದ 110 ಕೆವಿ ಸಬ್‌ ಸ್ಟೇಶನ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಜ.10 ರಂದು ಸುಳ್ಯದಲ್ಲಿ ಶಂಕುಸ್ಥಾಪನೆ ನಡೆಯಲಿದೆ.

Advertisement
Advertisement

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಸ್‌ ಅಂಗಾರ, ಸುಳ್ಯದ 110 ಕೆವಿ ಸಬ್‌ಸ್ಟೇಷನ್ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಜನವರಿ 10 ರಂದು ಶಂಕುಸ್ಥಾಪನೆ ನಡೆಯಲಿದೆ. ಸುಳ್ಯದ ವಿದ್ಯುತ್ ಸಬ್ ಸ್ಟೇಷನ್ ಬಳಿಯಲ್ಲಿ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್‌ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ಮಾಡಾವಿನಿಂದ ಸುಳ್ಯಕ್ಕೆ 110 ಕೆವಿ ಲೈನ್ ಕಾರಿಡಾರ್ 22 ಕಿ.ಮಿ.ಉದ್ದವಿದೆ. ಇದರಲ್ಲಿ 1.8 ಕಿ.ಮಿ. ಲೈನ್ ಇದೆ. ಹೊಸತಾಗಿ 19.2 ಕಿ.ಮಿ. ಲೈನ್ ಮತ್ತು ಸುಳ್ಯದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ‌ ಆಗಲಿದೆ. ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಲಾಗಿದೆ. ಕಾಮಗಾರಿ ಪೂರ್ತಿಯಾಗಲು 12 ತಿಂಗಳ ಕಾಲಾವಕಾಶ ಇದೆ. ಮಾಡಾವು-ಕೊಳ್ತಿಗೆ, ಪೆರ್ಲಂಪಾಡಿ,  ಮೂಲಕ ಕನಕಮಜಲು ಜಾಲ್ಸೂರು ಬೈತ್ತಡ್ಕ-ಅಜ್ಜಾವರ ಮೂಲಕ ಹೊಸ ಲೈನ್ ಹಾದು ಬರಲಿದೆ. ಈಗಿನ‌ ಮೆಸ್ಕಾಂ 33 ಕೆವಿ ಸಬ್ ಸ್ಟೇಷನ್ ಸಮೀಪ ಹೊಸ 110 ಸಬ್ ಸ್ಟೇಷನ್ ನಿರ್ಮಾಣ ಆಗಲಿದೆ. 22 ಮೀಟರ್‌ನ ಕಾರಿಡಾರ್ ನಿರ್ಮಾಣವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

3 minutes ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

26 minutes ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

6 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

7 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

14 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

23 hours ago