Advertisement
The Rural Mirror ಫಾಲೋಅಪ್

ಸುಳ್ಯದ ವಿದ್ಯುತ್‌ ಸಮಸ್ಯೆ | 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ 5 ಹೇಳಿಕೆಗಳು….! | ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಮಾಧ್ಯಮಗಳು ಹೇಳುವುದು ಸುಳ್ಳೋ….? ಹೇಳಿಕೆಗಳು ಸುಳ್ಳೋ ? |

Share

ಸುಳ್ಯದ ವಿದ್ಯುತ್‌ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ. ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಎರಡು-ಮೂರು ದಿನಗಳ ಕಾಲ ಕತ್ತಲೆಯಲ್ಲಿ ಕಳೆಯುತ್ತದೆ. ಈ ನಡುವೆಯೇ ಸುಳ್ಯದ  110 ಕೆವಿ ಸಬ್‌ ಸ್ಟೇಶನ್‌ ಬಗ್ಗೆಯೂ ಚರ್ಚೆಯಾಗಿದೆ. ಇದೀಗ ಸುಳ್ಯದ ಮಾಧ್ಯಮಗಳು ಹೇಳುವುದು ಸುಳ್ಳೋ ಅಥವಾ ಹೇಳಿಕೆಗಳು ಸುಳ್ಳೋ ? ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಮಾಧ್ಯಮಗಳೂ ಏಕೆ ಇಂತಹ ಹೇಳಿಕೆಗಳನ್ನು ಪ್ರಶ್ನಿಸುವುದಿಲ್ಲ ಎಂದು ವಿದ್ಯುತ್‌ ಬಳಕೆದಾರರು ಕೇಳುತ್ತಾರೆ.

ಸುಳ್ಯದ ವಿದ್ಯುತ್‌ ಸಮಸ್ಯೆಗೆ ಏಕೆ ಮುಕ್ತಿ ಸಿಗುತ್ತಿಲ್ಲ ? ಹೀಗೆಂದು ಸುಳ್ಯದ ಜನರು ಕೇಳುತ್ತಾರೆ. ಇದಕ್ಕೆ ಉತ್ತರ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದ ಕೂಡಲೇ ಎಂದು ಮೆಸ್ಕಾಂ ಮೂಲಗಳು ಹೇಳುತ್ತವೆ. ಪ್ರತೀ ಮಳೆಗಾಲವು ಕೂಡಾ ಅಲ್ಲಲ್ಲಿ ವಿದ್ಯುತ್‌ ತಂತಿ ತುಂಡಾಗುವುದೂ ಸೇರಿದಂತೆ ಮರದ ಗೆಲ್ಲು ತಾಗುವುದರಿಂದ ಟ್ರಿಪ್‌ ಆಗಿ ವಿದ್ಯುತ್‌ ಕಡಿತ ಉಂಟಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮರ ಬಿದ್ದು ಕಂಬ ತುಂಡಾಗಿ ವಿದ್ಯುತ್‌ ಸರಬರಾಜು ಕಡಿತವಾಗುತ್ತದೆ. ಹೀಗಾಗಿ ಸುಳ್ಯಕ್ಕೆ ವಿದ್ಯುತ್‌ ಪ್ರತೀ ಮಳೆಗಾಲವೂ ಸಮಸ್ಯೆಯೇ ಆಗಿದೆ. ಆದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದರೆ ಸುಳ್ಯದವರೆಗಿನ ವಿದ್ಯುತ್‌ ಸರಬರಾಜು ಯಾವುದೇ ತಡೆ ಇಲ್ಲದೆ ಬರಲು ಸಾಧ್ಯವಿದೆ ಎನ್ನುವುದು  ಮೆಸ್ಕಾಂ ಮೂಲಗಳ ಅಭಿಪ್ರಾಯ.

ಹಾಗಿದ್ದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಕೆಲಸ ಏನಾಗಿದೆ ಎಂದು ಕೇಳಿದರೆ ಕಳೆದ 3 ವರ್ಷಗಳಿಂದ ಹೇಳಿಕೆಗಳು ಬರುತ್ತವೆ. ಆದರೆ ಪ್ರಗತಿ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ. ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದರೆ “ಮಾಧ್ಯಮಗಳು ಆದದ್ದು ಬರೆಯುತ್ತಿಲ್ಲ ಎನ್ನುವ ಆರೋಪ” ಕೇಳಿಬರುತ್ತದೆ. ಹಾಗಿದ್ದರೆ ಕಳೆದ ಮೂರು ವರ್ಷದಲ್ಲಿ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಸಂಬಂಧಿಸಿದ ಹೇಳಿಕೆಗಳು ಇಲ್ಲಿದೆ. ಮಾಧ್ಯಮಗಳು ಹೇಳುವುದು, ಬರೆಯುವುದು ಸುಳ್ಳೋ ಅಥವಾ ಈ ಹೇಳಿಕೆಗಳು ಸುಳ್ಳೋ ಎಂದು ಜನರು ಪ್ರಶ್ನಿಸುವಂತಾಗಿದೆ.

2019 ಮೇ 27….

14 ಜನವರಿ 2020….

23 ಜನವರಿ 2020….

2020 ಮೇ 17…..

2022 ಮೇ 12….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago