Advertisement
The Rural Mirror ಫಾಲೋಅಪ್

ಸುಳ್ಯದ ವಿದ್ಯುತ್‌ ಸಮಸ್ಯೆ | 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ 5 ಹೇಳಿಕೆಗಳು….! | ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಮಾಧ್ಯಮಗಳು ಹೇಳುವುದು ಸುಳ್ಳೋ….? ಹೇಳಿಕೆಗಳು ಸುಳ್ಳೋ ? |

Share

ಸುಳ್ಯದ ವಿದ್ಯುತ್‌ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ. ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಎರಡು-ಮೂರು ದಿನಗಳ ಕಾಲ ಕತ್ತಲೆಯಲ್ಲಿ ಕಳೆಯುತ್ತದೆ. ಈ ನಡುವೆಯೇ ಸುಳ್ಯದ  110 ಕೆವಿ ಸಬ್‌ ಸ್ಟೇಶನ್‌ ಬಗ್ಗೆಯೂ ಚರ್ಚೆಯಾಗಿದೆ. ಇದೀಗ ಸುಳ್ಯದ ಮಾಧ್ಯಮಗಳು ಹೇಳುವುದು ಸುಳ್ಳೋ ಅಥವಾ ಹೇಳಿಕೆಗಳು ಸುಳ್ಳೋ ? ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಮಾಧ್ಯಮಗಳೂ ಏಕೆ ಇಂತಹ ಹೇಳಿಕೆಗಳನ್ನು ಪ್ರಶ್ನಿಸುವುದಿಲ್ಲ ಎಂದು ವಿದ್ಯುತ್‌ ಬಳಕೆದಾರರು ಕೇಳುತ್ತಾರೆ.

ಸುಳ್ಯದ ವಿದ್ಯುತ್‌ ಸಮಸ್ಯೆಗೆ ಏಕೆ ಮುಕ್ತಿ ಸಿಗುತ್ತಿಲ್ಲ ? ಹೀಗೆಂದು ಸುಳ್ಯದ ಜನರು ಕೇಳುತ್ತಾರೆ. ಇದಕ್ಕೆ ಉತ್ತರ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದ ಕೂಡಲೇ ಎಂದು ಮೆಸ್ಕಾಂ ಮೂಲಗಳು ಹೇಳುತ್ತವೆ. ಪ್ರತೀ ಮಳೆಗಾಲವು ಕೂಡಾ ಅಲ್ಲಲ್ಲಿ ವಿದ್ಯುತ್‌ ತಂತಿ ತುಂಡಾಗುವುದೂ ಸೇರಿದಂತೆ ಮರದ ಗೆಲ್ಲು ತಾಗುವುದರಿಂದ ಟ್ರಿಪ್‌ ಆಗಿ ವಿದ್ಯುತ್‌ ಕಡಿತ ಉಂಟಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮರ ಬಿದ್ದು ಕಂಬ ತುಂಡಾಗಿ ವಿದ್ಯುತ್‌ ಸರಬರಾಜು ಕಡಿತವಾಗುತ್ತದೆ. ಹೀಗಾಗಿ ಸುಳ್ಯಕ್ಕೆ ವಿದ್ಯುತ್‌ ಪ್ರತೀ ಮಳೆಗಾಲವೂ ಸಮಸ್ಯೆಯೇ ಆಗಿದೆ. ಆದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದರೆ ಸುಳ್ಯದವರೆಗಿನ ವಿದ್ಯುತ್‌ ಸರಬರಾಜು ಯಾವುದೇ ತಡೆ ಇಲ್ಲದೆ ಬರಲು ಸಾಧ್ಯವಿದೆ ಎನ್ನುವುದು  ಮೆಸ್ಕಾಂ ಮೂಲಗಳ ಅಭಿಪ್ರಾಯ.

ಹಾಗಿದ್ದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಕೆಲಸ ಏನಾಗಿದೆ ಎಂದು ಕೇಳಿದರೆ ಕಳೆದ 3 ವರ್ಷಗಳಿಂದ ಹೇಳಿಕೆಗಳು ಬರುತ್ತವೆ. ಆದರೆ ಪ್ರಗತಿ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ. ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದರೆ “ಮಾಧ್ಯಮಗಳು ಆದದ್ದು ಬರೆಯುತ್ತಿಲ್ಲ ಎನ್ನುವ ಆರೋಪ” ಕೇಳಿಬರುತ್ತದೆ. ಹಾಗಿದ್ದರೆ ಕಳೆದ ಮೂರು ವರ್ಷದಲ್ಲಿ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಸಂಬಂಧಿಸಿದ ಹೇಳಿಕೆಗಳು ಇಲ್ಲಿದೆ. ಮಾಧ್ಯಮಗಳು ಹೇಳುವುದು, ಬರೆಯುವುದು ಸುಳ್ಳೋ ಅಥವಾ ಈ ಹೇಳಿಕೆಗಳು ಸುಳ್ಳೋ ಎಂದು ಜನರು ಪ್ರಶ್ನಿಸುವಂತಾಗಿದೆ.

2019 ಮೇ 27….

14 ಜನವರಿ 2020….

23 ಜನವರಿ 2020….

2020 ಮೇ 17…..

2022 ಮೇ 12….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago