ಸುಳ್ಯ ಬಹುನಿರೀಕ್ಷಿತ ಯೋಜನೆಗೆ ಜ.10 ರಂದು ಶಂಕುಸ್ಥಾಪನೆ ನಡೆಯಲಿದೆ. ಅನೇಕ ವರ್ಷಗಳಿಂದ ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಇದೀಗ ಕಾಲ ಕೂಡಿಬಂದಿದೆ. ಇಂಧನ ಸಚಿವ ಸುನಿಲ್ ಕುಮಾರ್ 110 ಕೆ.ವಿ ವಿದ್ಯುತ್ ಉಪಕೇಂದ್ರ ಹಾಗೂ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ಸುಳ್ಯದ ಅಂಬಟಡ್ಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಎಸ್ ಅಂಗಾರ , ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುವರು. ಸುಳ್ಯದಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಇತ್ತು. ಇದಕ್ಕಾಗಿ 110 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಬೇಡಿಕೆ ಇತ್ತು. ಇದೀಗ ಕ್ರಿಯಾಶೀಲ ಸಚಿವ ಸುನಿಲ್ ಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸುವ ಮೂಲಕ ಸುಳ್ಯದ ಬಹುಕಾಲದ ಬೇಡಿಕೆಗೆ ಚಾಲನೆ ದೊರೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel