ರಸ್ತೆಗಳ ಬಳಿಕ ಈಗ ಸುಳ್ಯದಲ್ಲಿ ವಿದ್ಯುತ್‌ ಸಮಸ್ಯೆ ನಿವಾರಣೆಯ ಕಡೆಗೆ ಹೆಜ್ಜೆ | 110 ಕೆವಿ ವಿದ್ಯುತ್‌ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್‌ |

September 16, 2022
9:18 PM

ಹಲವು ಸಮಯಗಳ ಬಳಿಕ ಸುಳ್ಯ ಅಭಿವೃದ್ಧಿಯ ಕಡೆಗೆ ಹೆಜ್ಜೆ ಹಾಕುತ್ತಿದೆ. ತಾಲೂಕಿನ 172 ರಸ್ತೆಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆದ ಬಳಿಕ ಇದೀಗ ಸುಳ್ಯದ ಅನೇಕ ಸಮಯಗಳ ಬೇಡಿಕೆಯಾಗಿದ್ದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗು 110 ಕೆ.ವಿ.ವಿದ್ಯುತ್ ಲೈನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಈ ಬಗ್ಗೆ ಈಗಾಗಲೇ ಪತ್ರಿಕೆಗಳಲ್ಲಿ ಟೆಂಡರ್‌ ಪ್ರಕ್ರಿಯೆಯೂ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯದಲ್ಲಿ 33 / 11 ಕೆ.ವಿ . ವಿದ್ಯುತ್ ಉಪಕೇಂದ್ರವನ್ನು 110 / 11 ಕೆವಿ ವಿದ್ಯುತ್ ಉಪಕೇಂದ್ರವನ್ನಾಗಿ ಉನ್ನತೀಕರಿಸುವುದು ಹಾಗು ಸಂಬಂಧಿತ ಪ್ರಸರಣ ಮಾರ್ಗದೊಂದಿಗೆ ನಿರ್ಮಿಸುವುದಕ್ಕಾಗಿ ಪತ್ರಿಕೆಯಲ್ಲಿ ಟೆಂಡರ್‌ ಆಹ್ವಾನ ಮಾಡಲಾಗಿದೆ. ಈ ಮೂಲಕ ಸುಳ್ಯದ ಇನ್ನೊಂದು ಪ್ರಮುಖ ಬೇಡಿಕೆಯೂ ಈಡೇರಿಕೆಯಾಗುತ್ತಿದೆ.

ಸುಳ್ಯದ ವಿದ್ಯುತ್‌ ಸಮಸ್ಯೆ ಹಲವು ಸಮಯಗಳಿಂದ ಕಾಡುತ್ತಿತ್ತು. ಈ ಬಗ್ಗೆ ಅನೇಕ ಹೋರಾಟಗಳು, ಮನವಿಗಳೂ ನಡೆದಿತ್ತು. ಕೃಷಿ ಸಂಘಟನೆಯಾದ ಭಾರತೀಯ ಕಿಸಾನ್‌ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಈ ಬಗ್ಗೆ ಹಲವು ಸುತ್ತಿನ ಪ್ರಯತ್ನ ನಡೆಸಿದ್ದವು.  ಇದೀಗ ಸುಳ್ಯದ ಬಹುವರ್ಷದ ಬೇಡಿಕೆಯೊಂದು ಈಡೇರಿಕೆಯಾಗುತ್ತಿದೆ.‌‌ ಜಿಲ್ಲಾ ಉಸ್ತುವಾರಿ ಸಚಿವ, ಇಂಧನ ಸಚಿವ ಸುನಿಲ್‌ ಕುಮಾರ್ ಅವರು ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಸಭೆ ನಡೆಸಿದ್ದರು ಹಾಗೂ ಸುಳ್ಯದ ಹಲವು ಮೂಲಭೂತ ಸಮಸ್ಯೆಗಳ ನಿವಾರಣೆ ಕಡೆಗೆ ವಿಶೇಷ ಕಾಳಜಿ ವಹಿಸಿದ್ದರು. ಸುಳ್ಯದ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಕಳೆದ ತಿಂಗಳು ಟೆಂಡರ್‌ ಪ್ರಕ್ರಿಯೆ ಆರಂಭವಾಗಿತ್ತು.172 ರಸ್ತೆಗಳಿಗೆ ಟೆಂಡರ್‌ ಕರೆಯಲಾಗಿತ್ತು.

ಇದೀಗ ಸುಳ್ಯದಲ್ಲಿ ಕೃಷಿಕರ ವಿದ್ಯುತ್‌ ಶುಲ್ಕ ಸಂಪೂರ್ಣ ಮನ್ನಾದ ಬಳಿಕವೂ ಕೃಷಿಕರ ಖಾತೆಯಲ್ಲಿ ಬಾಕಿ ಎಂದು ನಮೂದಾಗಿತ್ತು.  ದ ಕ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಈ ಸಮಸ್ಯೆ ನಿವಾರಣೆಯಾದರೂ ಹಲವು ವರ್ಷಗಳಿಂದ ಸುಳ್ಯದಲ್ಲಿ ಮಾತ್ರಾ ಈ ಸಮಸ್ಯೆ ಕಾಡುತ್ತಿದೆ. ಇದಕ್ಕಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌ ಅವರು ವಿಶೇಷ ಗಮನಹರಿಸುವ ಭರವಸೆಯನ್ನೂ ಈಚೆಗೆ ಭೇಟಿ ನೀಡಿದ ಭಾರತೀಯ ಕಿಸಾನ್‌ ಸಂಘದ ನಿಯೋಗಕ್ಕೆ ಭರವಸೆ  ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror