Advertisement
ಸುದ್ದಿಗಳು

ಅಭಿವೃದ್ಧಿಯೂ ಮಾಡಲ್ಲ…. ಹಿಂದೂಗಳಿಗೆ ರಕ್ಷಣೆಯೂ ನೀಡಲ್ಲ… | ಸುಳ್ಯದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ |

Share

ರಾಜ್ಯದಲ್ಲಿ  ಹಿಂದೂಗಳಿಗೆ ರಕ್ಷಣೆ ಇಲ್ಲ.. ಸುಳ್ಯದಲ್ಲಿ ಅಭಿವೃದ್ಧಿಯೂ ಆಗಲ್ಲ… ಚುನಾವಣೆ ಬರುವಾಗ ನಾವು ಮನೆ ಮನೆಗೆ ಓಟು ಕೇಳಲು ಯಾವ ಮುಖದಲ್ಲಿ ಹೋಗುವುದು..? ಹೀಗೆಂದು ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯದ ಬೆಳ್ಳಾರೆ ನಿವಾಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶಗೊಂಡಿದ್ದರು. ಕಳೆದ ಹಲವಾರು ಸಮಯಗಳಿಂದ ಸುಳ್ಯದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಈಗಾಗಲೇ ಹಲವು ಕಡೆಗಳಲ್ಲಿ ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನಗಳು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿದೆ. ಆದರೆ ಬಹಿರಂಗವಾಗಿ ಸ್ಫೋಟಗೊಂಡಿರಲಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಆಕ್ರೋಶ ಸ್ಫೋಟಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲ, ಕಾರ್ಯಕರ್ತರು ಸಂಘಟನೆಯ ಸೂಚನೆ ಮೇರೆಗೇ ಕೆಲಸ ಮಾಡಿದರೂ ಕೇಸುಗಳಾದಾಗ ಯಾವ ಮುಖಂಡರೂ ಸಿಗುವುದಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಹತ್ಯೆಯಾದಾಗಲೂ ಮೌನವಾಗಿರುವ ನಾಯಕರು ಕೊನೆಗೆ ಬಂದು ನಾಟಕವಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸುಳ್ಯ ಅಭಿವೃದ್ಧಿ ನೆಲೆಯಲ್ಲೂ ಹಿಂದೆ ಇದೆ.ಪ್ರತೀ ಬಾರಿ ಕೂಡಾ ಚುನಾವಣೆ  ವೇಳೆ ಮತ ಕೇಳಲು ಹೋಗುವಾದ ಮತದಾರರು ನೇರವಾಗಿ ಪ್ರಶ್ನೆ ಮಾಡುತ್ತಾರೆ. ಹಾಗಿದ್ದರೂ ಇದುವರೆಗೆ ಹೇಳುತ್ತಲೇ ಬಂದರೂ ಯಾವ ಕೆಲಸವೂ ಆಗುತ್ತಿಲ್ಲ. ನಾಯಕರು ಕೂಡಾ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳ್ಳಾರೆಯಲ್ಲಿ ಬಿಜೆಪಿ ನಾಯಕರು ಆಗಮಿಸಿದಾಗ ಕಾರುಗಳನ್ನು ತಡೆದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆ ಮಾತನಾಡಲು ತೆರಳಿದವರನ್ನು ಮಾತನಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಚಿವ ಸುನಿಲ್‌ ಕುಮಾರ್‌ ಕಾರ್ಯಕರ್ತರನ್ನು ತಪ್ಪಿಸಿ ಹೋಗಿದ್ದರು. ಸಚಿವ ಅಂಗಾರ ಅವರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುವ ವೇಳೆ ಮೌನವಾಗಿದ್ದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಅವರೂ ಮೌನವಾಗಿದ್ದರು. ಅವರ ಕಾರನ್ನು ತಡೆದ ಗೋ ಬ್ಯಾಕ್‌ ಎಂದೂ ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

53 minutes ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

10 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

10 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

11 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

18 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

22 hours ago