Advertisement
ಸುದ್ದಿಗಳು

ಅಭಿವೃದ್ಧಿಯೂ ಮಾಡಲ್ಲ…. ಹಿಂದೂಗಳಿಗೆ ರಕ್ಷಣೆಯೂ ನೀಡಲ್ಲ… | ಸುಳ್ಯದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ |

Share

ರಾಜ್ಯದಲ್ಲಿ  ಹಿಂದೂಗಳಿಗೆ ರಕ್ಷಣೆ ಇಲ್ಲ.. ಸುಳ್ಯದಲ್ಲಿ ಅಭಿವೃದ್ಧಿಯೂ ಆಗಲ್ಲ… ಚುನಾವಣೆ ಬರುವಾಗ ನಾವು ಮನೆ ಮನೆಗೆ ಓಟು ಕೇಳಲು ಯಾವ ಮುಖದಲ್ಲಿ ಹೋಗುವುದು..? ಹೀಗೆಂದು ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯದ ಬೆಳ್ಳಾರೆ ನಿವಾಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶಗೊಂಡಿದ್ದರು. ಕಳೆದ ಹಲವಾರು ಸಮಯಗಳಿಂದ ಸುಳ್ಯದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಈಗಾಗಲೇ ಹಲವು ಕಡೆಗಳಲ್ಲಿ ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನಗಳು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿದೆ. ಆದರೆ ಬಹಿರಂಗವಾಗಿ ಸ್ಫೋಟಗೊಂಡಿರಲಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಆಕ್ರೋಶ ಸ್ಫೋಟಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲ, ಕಾರ್ಯಕರ್ತರು ಸಂಘಟನೆಯ ಸೂಚನೆ ಮೇರೆಗೇ ಕೆಲಸ ಮಾಡಿದರೂ ಕೇಸುಗಳಾದಾಗ ಯಾವ ಮುಖಂಡರೂ ಸಿಗುವುದಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಹತ್ಯೆಯಾದಾಗಲೂ ಮೌನವಾಗಿರುವ ನಾಯಕರು ಕೊನೆಗೆ ಬಂದು ನಾಟಕವಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸುಳ್ಯ ಅಭಿವೃದ್ಧಿ ನೆಲೆಯಲ್ಲೂ ಹಿಂದೆ ಇದೆ.ಪ್ರತೀ ಬಾರಿ ಕೂಡಾ ಚುನಾವಣೆ  ವೇಳೆ ಮತ ಕೇಳಲು ಹೋಗುವಾದ ಮತದಾರರು ನೇರವಾಗಿ ಪ್ರಶ್ನೆ ಮಾಡುತ್ತಾರೆ. ಹಾಗಿದ್ದರೂ ಇದುವರೆಗೆ ಹೇಳುತ್ತಲೇ ಬಂದರೂ ಯಾವ ಕೆಲಸವೂ ಆಗುತ್ತಿಲ್ಲ. ನಾಯಕರು ಕೂಡಾ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳ್ಳಾರೆಯಲ್ಲಿ ಬಿಜೆಪಿ ನಾಯಕರು ಆಗಮಿಸಿದಾಗ ಕಾರುಗಳನ್ನು ತಡೆದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆ ಮಾತನಾಡಲು ತೆರಳಿದವರನ್ನು ಮಾತನಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಚಿವ ಸುನಿಲ್‌ ಕುಮಾರ್‌ ಕಾರ್ಯಕರ್ತರನ್ನು ತಪ್ಪಿಸಿ ಹೋಗಿದ್ದರು. ಸಚಿವ ಅಂಗಾರ ಅವರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುವ ವೇಳೆ ಮೌನವಾಗಿದ್ದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಅವರೂ ಮೌನವಾಗಿದ್ದರು. ಅವರ ಕಾರನ್ನು ತಡೆದ ಗೋ ಬ್ಯಾಕ್‌ ಎಂದೂ ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 hour ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

2 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

6 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

6 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

6 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

22 hours ago