Advertisement
ಸುದ್ದಿಗಳು

ಅಭಿವೃದ್ಧಿಯೂ ಮಾಡಲ್ಲ…. ಹಿಂದೂಗಳಿಗೆ ರಕ್ಷಣೆಯೂ ನೀಡಲ್ಲ… | ಸುಳ್ಯದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ |

Share

ರಾಜ್ಯದಲ್ಲಿ  ಹಿಂದೂಗಳಿಗೆ ರಕ್ಷಣೆ ಇಲ್ಲ.. ಸುಳ್ಯದಲ್ಲಿ ಅಭಿವೃದ್ಧಿಯೂ ಆಗಲ್ಲ… ಚುನಾವಣೆ ಬರುವಾಗ ನಾವು ಮನೆ ಮನೆಗೆ ಓಟು ಕೇಳಲು ಯಾವ ಮುಖದಲ್ಲಿ ಹೋಗುವುದು..? ಹೀಗೆಂದು ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement

ಸುಳ್ಯದ ಬೆಳ್ಳಾರೆ ನಿವಾಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶಗೊಂಡಿದ್ದರು. ಕಳೆದ ಹಲವಾರು ಸಮಯಗಳಿಂದ ಸುಳ್ಯದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಈಗಾಗಲೇ ಹಲವು ಕಡೆಗಳಲ್ಲಿ ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನಗಳು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿದೆ. ಆದರೆ ಬಹಿರಂಗವಾಗಿ ಸ್ಫೋಟಗೊಂಡಿರಲಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಆಕ್ರೋಶ ಸ್ಫೋಟಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲ, ಕಾರ್ಯಕರ್ತರು ಸಂಘಟನೆಯ ಸೂಚನೆ ಮೇರೆಗೇ ಕೆಲಸ ಮಾಡಿದರೂ ಕೇಸುಗಳಾದಾಗ ಯಾವ ಮುಖಂಡರೂ ಸಿಗುವುದಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಹತ್ಯೆಯಾದಾಗಲೂ ಮೌನವಾಗಿರುವ ನಾಯಕರು ಕೊನೆಗೆ ಬಂದು ನಾಟಕವಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಇದೇ ವೇಳೆ ಸುಳ್ಯ ಅಭಿವೃದ್ಧಿ ನೆಲೆಯಲ್ಲೂ ಹಿಂದೆ ಇದೆ.ಪ್ರತೀ ಬಾರಿ ಕೂಡಾ ಚುನಾವಣೆ  ವೇಳೆ ಮತ ಕೇಳಲು ಹೋಗುವಾದ ಮತದಾರರು ನೇರವಾಗಿ ಪ್ರಶ್ನೆ ಮಾಡುತ್ತಾರೆ. ಹಾಗಿದ್ದರೂ ಇದುವರೆಗೆ ಹೇಳುತ್ತಲೇ ಬಂದರೂ ಯಾವ ಕೆಲಸವೂ ಆಗುತ್ತಿಲ್ಲ. ನಾಯಕರು ಕೂಡಾ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

ಬೆಳ್ಳಾರೆಯಲ್ಲಿ ಬಿಜೆಪಿ ನಾಯಕರು ಆಗಮಿಸಿದಾಗ ಕಾರುಗಳನ್ನು ತಡೆದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆ ಮಾತನಾಡಲು ತೆರಳಿದವರನ್ನು ಮಾತನಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಚಿವ ಸುನಿಲ್‌ ಕುಮಾರ್‌ ಕಾರ್ಯಕರ್ತರನ್ನು ತಪ್ಪಿಸಿ ಹೋಗಿದ್ದರು. ಸಚಿವ ಅಂಗಾರ ಅವರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುವ ವೇಳೆ ಮೌನವಾಗಿದ್ದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಅವರೂ ಮೌನವಾಗಿದ್ದರು. ಅವರ ಕಾರನ್ನು ತಡೆದ ಗೋ ಬ್ಯಾಕ್‌ ಎಂದೂ ಹೇಳಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago