Advertisement
ಸುದ್ದಿಗಳು

ಅಭಿವೃದ್ಧಿಯೂ ಮಾಡಲ್ಲ…. ಹಿಂದೂಗಳಿಗೆ ರಕ್ಷಣೆಯೂ ನೀಡಲ್ಲ… | ಸುಳ್ಯದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ |

Share

ರಾಜ್ಯದಲ್ಲಿ  ಹಿಂದೂಗಳಿಗೆ ರಕ್ಷಣೆ ಇಲ್ಲ.. ಸುಳ್ಯದಲ್ಲಿ ಅಭಿವೃದ್ಧಿಯೂ ಆಗಲ್ಲ… ಚುನಾವಣೆ ಬರುವಾಗ ನಾವು ಮನೆ ಮನೆಗೆ ಓಟು ಕೇಳಲು ಯಾವ ಮುಖದಲ್ಲಿ ಹೋಗುವುದು..? ಹೀಗೆಂದು ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯದ ಬೆಳ್ಳಾರೆ ನಿವಾಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶಗೊಂಡಿದ್ದರು. ಕಳೆದ ಹಲವಾರು ಸಮಯಗಳಿಂದ ಸುಳ್ಯದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಈಗಾಗಲೇ ಹಲವು ಕಡೆಗಳಲ್ಲಿ ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನಗಳು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿದೆ. ಆದರೆ ಬಹಿರಂಗವಾಗಿ ಸ್ಫೋಟಗೊಂಡಿರಲಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಆಕ್ರೋಶ ಸ್ಫೋಟಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲ, ಕಾರ್ಯಕರ್ತರು ಸಂಘಟನೆಯ ಸೂಚನೆ ಮೇರೆಗೇ ಕೆಲಸ ಮಾಡಿದರೂ ಕೇಸುಗಳಾದಾಗ ಯಾವ ಮುಖಂಡರೂ ಸಿಗುವುದಿಲ್ಲ. ಇದೀಗ ಸಕ್ರಿಯ ಕಾರ್ಯಕರ್ತ ಹತ್ಯೆಯಾದಾಗಲೂ ಮೌನವಾಗಿರುವ ನಾಯಕರು ಕೊನೆಗೆ ಬಂದು ನಾಟಕವಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸುಳ್ಯ ಅಭಿವೃದ್ಧಿ ನೆಲೆಯಲ್ಲೂ ಹಿಂದೆ ಇದೆ.ಪ್ರತೀ ಬಾರಿ ಕೂಡಾ ಚುನಾವಣೆ  ವೇಳೆ ಮತ ಕೇಳಲು ಹೋಗುವಾದ ಮತದಾರರು ನೇರವಾಗಿ ಪ್ರಶ್ನೆ ಮಾಡುತ್ತಾರೆ. ಹಾಗಿದ್ದರೂ ಇದುವರೆಗೆ ಹೇಳುತ್ತಲೇ ಬಂದರೂ ಯಾವ ಕೆಲಸವೂ ಆಗುತ್ತಿಲ್ಲ. ನಾಯಕರು ಕೂಡಾ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳ್ಳಾರೆಯಲ್ಲಿ ಬಿಜೆಪಿ ನಾಯಕರು ಆಗಮಿಸಿದಾಗ ಕಾರುಗಳನ್ನು ತಡೆದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆ ಮಾತನಾಡಲು ತೆರಳಿದವರನ್ನು ಮಾತನಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಚಿವ ಸುನಿಲ್‌ ಕುಮಾರ್‌ ಕಾರ್ಯಕರ್ತರನ್ನು ತಪ್ಪಿಸಿ ಹೋಗಿದ್ದರು. ಸಚಿವ ಅಂಗಾರ ಅವರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುವ ವೇಳೆ ಮೌನವಾಗಿದ್ದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಅವರೂ ಮೌನವಾಗಿದ್ದರು. ಅವರ ಕಾರನ್ನು ತಡೆದ ಗೋ ಬ್ಯಾಕ್‌ ಎಂದೂ ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago