ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ದತಾ ಸಭೆಯು ದೇವಮ್ಮ ಕಾನತ್ತಿಲ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಚರ್ಚಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ತಯಾರಿಸಿ ಧನಾತ್ಮಕ ರಾಜಕೀಯದ ಕಡೆಗೆ ಹೆಜ್ಜೆ ಇರಿಸಲು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ನೇತೃತ್ವದಲ್ಲಿ ಸುರೇಶ್ ಮುಂಡಕಜೆ, ಕಿರಣ್, ರಮೇಶ್, ರಂಜಿತ್ ಅಲ್ಲದೇ ಜಯರಾಜ್ ಕೇರ್ಪಳ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ, ಜಿಲ್ಲಾ ನಾಯಕ ರಶೀದ್ ಜಟ್ಟಿಪಳ್ಳ, ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ನಾಯಕರಾದ ರಾಮಕೃಷ್ಣ ಬೀರಮಂಗಲ, ಕಲಂದರ್ ಎಲಿಮಲೆ, ನಳಿನ್ ಕುಮಾರ್ ರೈ, ಗುರುಪ್ರಸಾದ್ ಮೇರ್ಕಜೆ, ಯಶವಂತ್ ಕುಡೆಕಲ್ಲು, ದೀಕ್ಷಿತ್ ಕುಮಾರ್ ಜಯನಗರ, ಹಾಗೂ ಶಾರೀಖ್ ಡಿಎಂ, ಉಪಸ್ಥಿತರಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…