ಸುಳ್ಯ | ಆಮ್‌ ಆದ್ಮಿ ಪಕ್ಷದ ವತಿಯಿಂದ ಸುಳ್ಯದಾದ್ಯಂತ ಬೃಹತ್‌ ರೋಡ್‌ ಶೋ | ಕೊನೆಯ ಕ್ಷಣದಲ್ಲಿ ಸುಳ್ಯದಲ್ಲಿ ಸದ್ದು ಮಾಡಿದ ಎಎಪಿ |

May 8, 2023
11:26 AM

ಸುಳ್ಯವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷವು ಬೃಹತ್‌ ರೋಡ್‌ ಶೋ ಆರಂಭಿಸಿದೆ. ಸುಳ್ಯ ಕ್ಷೇತ್ರದಾದ್ಯಂತ ಬೃಹತ್‌ ರೋಡ್‌ ಶೋ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ. ಸಂಪಾಜೆಯಿಂದ ಆರಂಭಿಸಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ.

ಆಮ್‌ ಆದ್ಮಿ ಪಕ್ಷವು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಪ್ರಚಾರ ನಡೆಸಿದ ಪಕ್ಷಗಳಲ್ಲಿ  ಒಂದಾಗಿದೆ. ಸದ್ದಿಲ್ಲದೆ ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿನಿಂದ ಕೆಲಸ ಆರಂಭ ಮಾಡಿತ್ತು. ಅತೀ ಹೆಚ್ಚು ಮತದಾರರನ್ನು  ಸಂಪರ್ಕ ಮಾಡಿದೆ. ರೋಡ್‌ ಶೋ, ಕಾರ್ನರ್‌ ಸಭೆ, ಮತದಾರರ ಭೇಟಿ, ಸಾಮಾಜಿಕ ಜಾಲತಾಣ ಹೀಗೇ ಎಲ್ಲಾ ರೀತಿಯಿಂದಲೂ ಮತದಾರರನ್ನು ಸಂಪರ್ಕ ಮಾಡಿತ್ತು. ಅಭಿವೃದ್ಧಿಯ ಮೂಲಕ ಸುಳ್ಯದಲ್ಲಿ ಬದಲಾವಣೆಯನ್ನು ಬಯಸಿತ್ತು. ಗೆದ್ದರೂ ಸೋತರೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದೆ.  ಇದೀಗ ಸಂಪಾಜೆಯಿಂದ ಆರಂಭಿಸಿ ಬೃಹತ್‌ ರೋಡ್‌ ಶೋ ಸುಳ್ಯ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಸವಣೂರು ಹೀಗೇ ಸಂಪೂರ್ಣ ಕ್ಷೇತ್ರದಾದ್ಯಂತ ಮಿಂಚಿತ ಸಂಚಾರ ಮಾಡುವ ಮೂಲಕ ಎಎಪಿ ಸುಳ್ಯದಲ್ಲಿ ಸದ್ದು ಮಾಡಿದೆ.

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ತೆರದ ವಾಹನದಲ್ಲಿ ಮತಯಾಚನೆ ಮಾಡುತ್ತಾ ಸಾಗಿಸಿದರು. ಪಕ್ಷದ ಪ್ರಮುಖರು ವಾಹನದ ಜೊತೆ ಸಾಗಿದರು. 15ಕ್ಕೂ ಹೆಚ್ಚು ವಾಹನ, 500 ಕ್ಕೂ ಅಧಿಕ ಎಎಪಿ ಕಾರ್ಯಕರ್ತರು ಜೊತೆಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror