Advertisement
ಸುದ್ದಿಗಳು

ಸುಳ್ಯ | ಆಮ್‌ ಆದ್ಮಿ ಪಕ್ಷದ ವತಿಯಿಂದ ಸುಳ್ಯದಾದ್ಯಂತ ಬೃಹತ್‌ ರೋಡ್‌ ಶೋ | ಕೊನೆಯ ಕ್ಷಣದಲ್ಲಿ ಸುಳ್ಯದಲ್ಲಿ ಸದ್ದು ಮಾಡಿದ ಎಎಪಿ |

Share

ಸುಳ್ಯವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷವು ಬೃಹತ್‌ ರೋಡ್‌ ಶೋ ಆರಂಭಿಸಿದೆ. ಸುಳ್ಯ ಕ್ಷೇತ್ರದಾದ್ಯಂತ ಬೃಹತ್‌ ರೋಡ್‌ ಶೋ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ. ಸಂಪಾಜೆಯಿಂದ ಆರಂಭಿಸಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ.

ಆಮ್‌ ಆದ್ಮಿ ಪಕ್ಷವು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಪ್ರಚಾರ ನಡೆಸಿದ ಪಕ್ಷಗಳಲ್ಲಿ  ಒಂದಾಗಿದೆ. ಸದ್ದಿಲ್ಲದೆ ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿನಿಂದ ಕೆಲಸ ಆರಂಭ ಮಾಡಿತ್ತು. ಅತೀ ಹೆಚ್ಚು ಮತದಾರರನ್ನು  ಸಂಪರ್ಕ ಮಾಡಿದೆ. ರೋಡ್‌ ಶೋ, ಕಾರ್ನರ್‌ ಸಭೆ, ಮತದಾರರ ಭೇಟಿ, ಸಾಮಾಜಿಕ ಜಾಲತಾಣ ಹೀಗೇ ಎಲ್ಲಾ ರೀತಿಯಿಂದಲೂ ಮತದಾರರನ್ನು ಸಂಪರ್ಕ ಮಾಡಿತ್ತು. ಅಭಿವೃದ್ಧಿಯ ಮೂಲಕ ಸುಳ್ಯದಲ್ಲಿ ಬದಲಾವಣೆಯನ್ನು ಬಯಸಿತ್ತು. ಗೆದ್ದರೂ ಸೋತರೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದೆ.  ಇದೀಗ ಸಂಪಾಜೆಯಿಂದ ಆರಂಭಿಸಿ ಬೃಹತ್‌ ರೋಡ್‌ ಶೋ ಸುಳ್ಯ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಸವಣೂರು ಹೀಗೇ ಸಂಪೂರ್ಣ ಕ್ಷೇತ್ರದಾದ್ಯಂತ ಮಿಂಚಿತ ಸಂಚಾರ ಮಾಡುವ ಮೂಲಕ ಎಎಪಿ ಸುಳ್ಯದಲ್ಲಿ ಸದ್ದು ಮಾಡಿದೆ.

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ತೆರದ ವಾಹನದಲ್ಲಿ ಮತಯಾಚನೆ ಮಾಡುತ್ತಾ ಸಾಗಿಸಿದರು. ಪಕ್ಷದ ಪ್ರಮುಖರು ವಾಹನದ ಜೊತೆ ಸಾಗಿದರು. 15ಕ್ಕೂ ಹೆಚ್ಚು ವಾಹನ, 500 ಕ್ಕೂ ಅಧಿಕ ಎಎಪಿ ಕಾರ್ಯಕರ್ತರು ಜೊತೆಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

3 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

3 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

10 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

19 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

21 hours ago