ದಕ್ಷಿಣ ಕನ್ನಡದಲ್ಲಿ ಎಎಪಿ ಸದ್ದು | ಸುಳ್ಯದಲ್ಲಿ ಪ್ರಚಾರಕ್ಕಿಳಿದ ಆಮ್‌ ಆದ್ಮಿ ಪಕ್ಷ | ಅಭಿವೃದ್ಧಿಯೇ ನಮ್ಮ ಗುರಿ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌ |

March 17, 2023
2:20 PM

ವಿಧಾನಸಭಾ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುರುಕಾಗಿವೆ. ಇದೀಗ ದಕ್ಷಿಣ ಕನ್ನಡದಲ್ಲಿ ಆಮ್‌ ಆದ್ಮಿ ಪಕ್ಷ ಮೊದಲ ಬಾರಿಗೆ ಸದ್ದು ಮಾಡಲು ಆರಂಭಿಸಿದೆ. ಸುಳ್ಯದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದು ಗ್ರಾಮೀಣ ಭಾಗದಲ್ಲೂ ಪ್ರಚಾರ ಕಾರ್ಯಕ್ಕೆ ವೇಗ ನೀಡಿದೆ. ಇದೇ ವೇಳೆ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌ ಹೇಳಿದ್ದಾರೆ.

ದೆಹಲಿ ಬಳಿಕ ವಿವಿಧ ರಾಜ್ಯಗಳಲ್ಲೂ ಹರಡಿಕೊಂಡ ಆಮ್‌ ಆದ್ಮಿ ಪಕ್ಷವು  ರಾಷ್ಟ್ರೀಯ ಪಕ್ಷವಾಗಿ ಸ್ಥಾನ ಪಡೆದುಕೊಂಡಿತ್ತು. ಇದೀಗ ರಾಜ್ಯದಲ್ಲೂ ಸ್ಫರ್ಧೆಗೆ ಇಳಿಯುತ್ತಿದೆ. ರಾಜ್ಯದ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದೆ. ದಕ್ಷಿಣ ಕನ್ನಡದಲ್ಲೂ ಈಗ ಎಎಪಿ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ಕೆಲಸ ಆರಂಭಿಸಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.

ದೇಶದ ರಾಜಕೀಯ ಶುದ್ದೀಕರಣವಾಗಬೇಕು, ವಿದ್ಯಾವಂತರು ಹೆಚ್ಚು ರಾಜಕೀಯ ಕ್ಷೇತ್ರದಲ್ಲಿ  ತೊಡಗಿಸಿಕೊಂಡು, ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತಾಗಬೇಕು, ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲಭೂಸ ಸೌಲಭ್ಯಗಳನ್ನು ಜನರಿಗೆ ಒದಗಿಸುವುದು ಎಎಪಿ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿತ್ತಾರೆ ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್.‌

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲೂ ಎಎಪಿ ಕೆಲಸ ಆರಂಭಿಸಿದ್ದು, ವಿವಿದೆಡೆ ಪ್ರಚಾರ ಕಾರ್ಯ ಮನೆ ಮನೆ ಭೇಟಿ ಸೇರಿದಂತೆ ಸಂಘಟನೆಯನ್ನು ಬಲಗೊಳಿಸಿದೆ. ಸುಳ್ಯದಲ್ಲಿ ಸಾಕಷ್ಟು ಅಭಿವೃದ್ಧಿಯ ಕೊರತೆ, ಹಿನ್ನಡೆ ಇರುವುದು  ಕಂಡುಬರುತ್ತಿದೆ. ಹೀಗಾಗಿ ಜನರಿಗೆ ಈಗ ಅಭಿವೃದ್ಧಿಯ ರಾಜಕಾರಣ ಬೇಕಾಗಿದೆ, ಇದನ್ನು ನಾವು ಮಾಡಿ ತೋರಿಸುತ್ತೇವೆ ಎಂದು  ಎಎಪಿ ಅಭ್ಯರ್ಥಿ ಆಕಾಂಕ್ಷಿ, ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror