Advertisement
ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಎಎಪಿ ಸದ್ದು | ಸುಳ್ಯದಲ್ಲಿ ಪ್ರಚಾರಕ್ಕಿಳಿದ ಆಮ್‌ ಆದ್ಮಿ ಪಕ್ಷ | ಅಭಿವೃದ್ಧಿಯೇ ನಮ್ಮ ಗುರಿ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌ |

Share

ವಿಧಾನಸಭಾ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುರುಕಾಗಿವೆ. ಇದೀಗ ದಕ್ಷಿಣ ಕನ್ನಡದಲ್ಲಿ ಆಮ್‌ ಆದ್ಮಿ ಪಕ್ಷ ಮೊದಲ ಬಾರಿಗೆ ಸದ್ದು ಮಾಡಲು ಆರಂಭಿಸಿದೆ. ಸುಳ್ಯದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದು ಗ್ರಾಮೀಣ ಭಾಗದಲ್ಲೂ ಪ್ರಚಾರ ಕಾರ್ಯಕ್ಕೆ ವೇಗ ನೀಡಿದೆ. ಇದೇ ವೇಳೆ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌ ಹೇಳಿದ್ದಾರೆ.

Advertisement
Advertisement

ದೆಹಲಿ ಬಳಿಕ ವಿವಿಧ ರಾಜ್ಯಗಳಲ್ಲೂ ಹರಡಿಕೊಂಡ ಆಮ್‌ ಆದ್ಮಿ ಪಕ್ಷವು  ರಾಷ್ಟ್ರೀಯ ಪಕ್ಷವಾಗಿ ಸ್ಥಾನ ಪಡೆದುಕೊಂಡಿತ್ತು. ಇದೀಗ ರಾಜ್ಯದಲ್ಲೂ ಸ್ಫರ್ಧೆಗೆ ಇಳಿಯುತ್ತಿದೆ. ರಾಜ್ಯದ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದೆ. ದಕ್ಷಿಣ ಕನ್ನಡದಲ್ಲೂ ಈಗ ಎಎಪಿ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ಕೆಲಸ ಆರಂಭಿಸಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.

Advertisement

ದೇಶದ ರಾಜಕೀಯ ಶುದ್ದೀಕರಣವಾಗಬೇಕು, ವಿದ್ಯಾವಂತರು ಹೆಚ್ಚು ರಾಜಕೀಯ ಕ್ಷೇತ್ರದಲ್ಲಿ  ತೊಡಗಿಸಿಕೊಂಡು, ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತಾಗಬೇಕು, ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲಭೂಸ ಸೌಲಭ್ಯಗಳನ್ನು ಜನರಿಗೆ ಒದಗಿಸುವುದು ಎಎಪಿ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿತ್ತಾರೆ ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್.‌

Advertisement

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲೂ ಎಎಪಿ ಕೆಲಸ ಆರಂಭಿಸಿದ್ದು, ವಿವಿದೆಡೆ ಪ್ರಚಾರ ಕಾರ್ಯ ಮನೆ ಮನೆ ಭೇಟಿ ಸೇರಿದಂತೆ ಸಂಘಟನೆಯನ್ನು ಬಲಗೊಳಿಸಿದೆ. ಸುಳ್ಯದಲ್ಲಿ ಸಾಕಷ್ಟು ಅಭಿವೃದ್ಧಿಯ ಕೊರತೆ, ಹಿನ್ನಡೆ ಇರುವುದು  ಕಂಡುಬರುತ್ತಿದೆ. ಹೀಗಾಗಿ ಜನರಿಗೆ ಈಗ ಅಭಿವೃದ್ಧಿಯ ರಾಜಕಾರಣ ಬೇಕಾಗಿದೆ, ಇದನ್ನು ನಾವು ಮಾಡಿ ತೋರಿಸುತ್ತೇವೆ ಎಂದು  ಎಎಪಿ ಅಭ್ಯರ್ಥಿ ಆಕಾಂಕ್ಷಿ, ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

14 mins ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

54 mins ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

1 hour ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

2 hours ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

3 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

4 hours ago