ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಹೇಗೆ ? | ಜನಪ್ರತಿನಿಧಿಗಳೇ ಮೌನವಾದರೆ ಹೇಗೆ..? | ಬ್ಯಾನರ್‌ ಜಗಳ ಹೆಚ್ಚಾಗುವ ಮೊದಲು ಇಲಾಖೆಗಳು-ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಬುದ್ದಿವಂತ ಜನಪ್ರತಿನಿಧಿಗಳು ಇದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿಗಳೂ ಇದ್ದಾರೆ. ಆದರೆ ಈಚೆಗೆ ಶಾಂತಿ ಸುವ್ಯವಸ್ಥೆ ಕಡೆಗೆ ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯಕತೆ ಇದೆ. ಈಗ ಅಧಿಕಾರಿಗಳು , ಪೊಲೀಸ್‌ ಇಲಾಖೆಯ ಅಧಿಕಾರಿಗಳು ಅಸಹಾಯಕತೆಯನ್ನು ವ್ಯಕ್ತಪಡಿಸುವುದು ಈಚೆಗೆ ಕೆಲವು ಪ್ರಕರಣಗಳಲ್ಲಿ ಕಂಡುಬಂದಿದೆ.

Advertisement

ಓಟಿನ ರಾಜಕಾರಣವನ್ನು ಎಲ್ಲಾ ಪಕ್ಷಗಳು ಈಗ ಬಿಟ್ಟು, ಶಾಂತಿ, ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ಸ್ಥಿತಿ ಬಂದಿದೆ. ಸುಳ್ಯದಲ್ಲಿ ಮಂಗಳವಾರ ಕಾರ್ಯಕ್ರಮ ಆಯೋಜನೆಯಾಗಿತ್ತು. ಇದೇ ವೇಳೆ ಬ್ಯಾನರ್‌ ತೆರವು-ಅಳವಡಿಕೆ ವಿವಾದವೊಂದು ಇಡೀ ದಿನ ಸದ್ದು ಮಾಡಿತು. ನಗರ ಪಂಚಾಯತ್‌ ಅಧಿಕಾರಿಗಳು ಬ್ಯಾನರ್‌ ತೆರವು ಮಾಡಿಸಿದರು, ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಬ್ಯಾನರ್‌ ತೆರವು ಮಾಡಲು ಹೇಳಿತ್ತು. ನಗರ ಪಂಚಾಯತ್‌ ತೆರವು ಮಾಡಿತು..!. ಇಷ್ಟೇ ಘಟನೆ. ಆದರೆ ಇಲ್ಲಿ ಯಾವ ಇಲಾಖೆಗಳೂ ಅಧಿಕೃತವಾದ ಪತ್ರದ ವ್ಯವಹಾರ ಮಾಡಲಿಲ್ಲ. ಇಲ್ಲಿ ಇದ್ದ ಉದ್ದೇಶ, ಶಾಂತಿ ಸುವ್ಯವಸ್ಥೆ.

ಬೃಹತ್‌ ಸಭೆ-ಜಾಥಾದ ನಡುವೆ ಒಂದು ಬ್ಯಾನರ್‌ ಮೇಲೆ ಕಲ್ಲು ಬಿದ್ದರೂ, ಸಣ್ಣದಾದ ಸಮಸ್ಯೆ ಬ್ಯಾನರ್‌ ಮೇಲಾದರೂ ಶಾಂತಿ ಕದಡುತ್ತದೆ.  ಈ ಹಿನ್ನೆಲೆಯಲ್ಲಿ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು, ಕೈಗೊಳ್ಳಲೇಬೇಕಾದ ಸಂಗತಿ ಕೂಡಾ. ವಾರಗಳ ಹಿಂದೆಯೂ ಸುಳ್ಯದಲ್ಲಿ ಅದೇ ಮಾದರಿಯಲ್ಲಿ ಬ್ಯಾನರ್‌ ಸಮಸ್ಯೆಯಾಗಿತ್ತು, ಆಗ ಜನಪ್ರತಿನಿಧಿಯೊಬ್ಬರು ಈ ಸಮಸ್ಯೆಯನ್ನು ಬಗೆಹರಿಸಿದ್ದರು, ಅಂತಹ ಮಾದರಿ ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಎಲ್ಲರೂ ಅನುಮತಿ ಪಡೆದೇ ಬ್ಯಾನರ್‌ ಅಳವಡಿಕೆ ಮಾಡುತ್ತಾರೆ. ನಗರ ಪಂಚಾಯತ್‌ ವಿಧಿಸುವ ದರವನ್ನು ಪಾವತಿ ಮಾಡಿಯೇ ಬ್ಯಾನರ್‌ ಅಳವಡಿಕೆ ಮಾಡಲಾಗುತ್ತದೆ.

ಹೀಗಿರುವಾಗ ಕಾನೂನು ಸುವ್ಯವಸ್ಥೆ, ಶಾಂತಿ ಎಂದೆಲ್ಲಾ ಕಾರ್ಯಕ್ರಮದ ನಡುವೆ ಬ್ಯಾನರ್‌ ತೆಗೆಸುವ ಪ್ರಕ್ರಿಯೆಯೂ ಆಭಾಸವಾಗುತ್ತದೆ, ಸಮಸ್ಯೆಯಾಗುತ್ತದೆ.ಸುಳ್ಯದಲ್ಲಿ ಬುಧವಾರ ಸಮಸ್ಯೆ ಆಗಿರುವುದು ಕೂಡಾ ಅದೇ.  ಒಂದೋ ಎರಡೂ ಕಾರ್ಯಕ್ರಮಗಳ ಬ್ಯಾನರ್‌ಗಳಿಗೆ ಅವಕಾಶ ನೀಡಬಾರದು, ಅಥವಾ ಅದಕ್ಕೆ ಬೇಕಾದ ಸೂಕ್ತ ಎಚ್ಚರಿಕೆಯನ್ನು ಇಲಾಖೆಯೇ ನೀಡಬೇಕು. ಒಂದು ವೇಳೆ ಸಮಸ್ಯೆಯಾಗುತ್ತದೆ ಎಂದಾದರೆ ಮೆರವಣಿಗೆ, ಜಾಥಾಗಳಿಗೆ , ಬ್ಯಾನರ್‌ಗಳಿಗೆ ಅವಕಾಶವನ್ನೇ ನೀಡಬಾರದು. ಇದೆಲ್ಲಾ ಅಗತ್ಯವಿದ್ದೂ, ಅನುಮತಿ ನೀಡಿ ಸಮಾಜದಲ್ಲಿ ಮತ್ತಷ್ಟು ವಿವಾದಗಳನ್ನು, ಸಮಸ್ಯೆಗಳನ್ನು ಸೃಷ್ಟಿಸುವುದು ಈಚೆಗೆ ಹೆಚ್ಚಾಗುತ್ತಿದೆ.

ಜನರ ಮತಗಳಿಂದ ಗೆದ್ದಿರುವ ಪ್ರತಿನಿಧಿಗಳು ಇಂತಹ ಸಮಸ್ಯೆಗಳು ಬಂದಾಗ ಅಧಿಕಾರಿಗಳ ಮೇಲೆಯೇ ಸಮಸ್ಯೆಯನ್ನು ವರ್ಗಾಯಿಸಿ ಸುಮ್ಮನಿರುವುದು ಕೂಡಾ ಕಂಡುಬಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಜನಪ್ರತಿನಿಧಿಗಳು ಸಾಮಾಜಿಕ ಹಿತದೃಷ್ಟಿಯಿಂದ ಮಧ್ಯಪ್ರವೇಶಿಸಿ ಇಂತಹ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವುದು ಸರಿಯಲ್ಲ. ಇಲಾಖೆಗಳಿಗೆ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ, ಕಾನೂನು ಪಾಲನೆ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಹೀಗಾಗಿ ಜನಪ್ರತಿನಿಧಿಗಳ ಪಾತ್ರವೂ ಇಲ್ಲಿ ಮುಖ್ಯವಾಗುತ್ತದೆ. ಎಲ್ಲದಕ್ಕೂ ಮೌನವಾಗಿರುವುದು ಜನಪ್ರತಿನಿಧಿಗಳಾದವರಿಗೂ ಅಗೌರವವೇ ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

2 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

2 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

2 hours ago

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…

9 hours ago

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…

10 hours ago

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…

11 hours ago