ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಹೇಗೆ ? | ಜನಪ್ರತಿನಿಧಿಗಳೇ ಮೌನವಾದರೆ ಹೇಗೆ..? | ಬ್ಯಾನರ್‌ ಜಗಳ ಹೆಚ್ಚಾಗುವ ಮೊದಲು ಇಲಾಖೆಗಳು-ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಬುದ್ದಿವಂತ ಜನಪ್ರತಿನಿಧಿಗಳು ಇದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿಗಳೂ ಇದ್ದಾರೆ. ಆದರೆ ಈಚೆಗೆ ಶಾಂತಿ ಸುವ್ಯವಸ್ಥೆ ಕಡೆಗೆ ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯಕತೆ ಇದೆ. ಈಗ ಅಧಿಕಾರಿಗಳು , ಪೊಲೀಸ್‌ ಇಲಾಖೆಯ ಅಧಿಕಾರಿಗಳು ಅಸಹಾಯಕತೆಯನ್ನು ವ್ಯಕ್ತಪಡಿಸುವುದು ಈಚೆಗೆ ಕೆಲವು ಪ್ರಕರಣಗಳಲ್ಲಿ ಕಂಡುಬಂದಿದೆ.

Advertisement

ಓಟಿನ ರಾಜಕಾರಣವನ್ನು ಎಲ್ಲಾ ಪಕ್ಷಗಳು ಈಗ ಬಿಟ್ಟು, ಶಾಂತಿ, ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ಸ್ಥಿತಿ ಬಂದಿದೆ. ಸುಳ್ಯದಲ್ಲಿ ಮಂಗಳವಾರ ಕಾರ್ಯಕ್ರಮ ಆಯೋಜನೆಯಾಗಿತ್ತು. ಇದೇ ವೇಳೆ ಬ್ಯಾನರ್‌ ತೆರವು-ಅಳವಡಿಕೆ ವಿವಾದವೊಂದು ಇಡೀ ದಿನ ಸದ್ದು ಮಾಡಿತು. ನಗರ ಪಂಚಾಯತ್‌ ಅಧಿಕಾರಿಗಳು ಬ್ಯಾನರ್‌ ತೆರವು ಮಾಡಿಸಿದರು, ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಬ್ಯಾನರ್‌ ತೆರವು ಮಾಡಲು ಹೇಳಿತ್ತು. ನಗರ ಪಂಚಾಯತ್‌ ತೆರವು ಮಾಡಿತು..!. ಇಷ್ಟೇ ಘಟನೆ. ಆದರೆ ಇಲ್ಲಿ ಯಾವ ಇಲಾಖೆಗಳೂ ಅಧಿಕೃತವಾದ ಪತ್ರದ ವ್ಯವಹಾರ ಮಾಡಲಿಲ್ಲ. ಇಲ್ಲಿ ಇದ್ದ ಉದ್ದೇಶ, ಶಾಂತಿ ಸುವ್ಯವಸ್ಥೆ.

ಬೃಹತ್‌ ಸಭೆ-ಜಾಥಾದ ನಡುವೆ ಒಂದು ಬ್ಯಾನರ್‌ ಮೇಲೆ ಕಲ್ಲು ಬಿದ್ದರೂ, ಸಣ್ಣದಾದ ಸಮಸ್ಯೆ ಬ್ಯಾನರ್‌ ಮೇಲಾದರೂ ಶಾಂತಿ ಕದಡುತ್ತದೆ.  ಈ ಹಿನ್ನೆಲೆಯಲ್ಲಿ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು, ಕೈಗೊಳ್ಳಲೇಬೇಕಾದ ಸಂಗತಿ ಕೂಡಾ. ವಾರಗಳ ಹಿಂದೆಯೂ ಸುಳ್ಯದಲ್ಲಿ ಅದೇ ಮಾದರಿಯಲ್ಲಿ ಬ್ಯಾನರ್‌ ಸಮಸ್ಯೆಯಾಗಿತ್ತು, ಆಗ ಜನಪ್ರತಿನಿಧಿಯೊಬ್ಬರು ಈ ಸಮಸ್ಯೆಯನ್ನು ಬಗೆಹರಿಸಿದ್ದರು, ಅಂತಹ ಮಾದರಿ ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಎಲ್ಲರೂ ಅನುಮತಿ ಪಡೆದೇ ಬ್ಯಾನರ್‌ ಅಳವಡಿಕೆ ಮಾಡುತ್ತಾರೆ. ನಗರ ಪಂಚಾಯತ್‌ ವಿಧಿಸುವ ದರವನ್ನು ಪಾವತಿ ಮಾಡಿಯೇ ಬ್ಯಾನರ್‌ ಅಳವಡಿಕೆ ಮಾಡಲಾಗುತ್ತದೆ.

ಹೀಗಿರುವಾಗ ಕಾನೂನು ಸುವ್ಯವಸ್ಥೆ, ಶಾಂತಿ ಎಂದೆಲ್ಲಾ ಕಾರ್ಯಕ್ರಮದ ನಡುವೆ ಬ್ಯಾನರ್‌ ತೆಗೆಸುವ ಪ್ರಕ್ರಿಯೆಯೂ ಆಭಾಸವಾಗುತ್ತದೆ, ಸಮಸ್ಯೆಯಾಗುತ್ತದೆ.ಸುಳ್ಯದಲ್ಲಿ ಬುಧವಾರ ಸಮಸ್ಯೆ ಆಗಿರುವುದು ಕೂಡಾ ಅದೇ.  ಒಂದೋ ಎರಡೂ ಕಾರ್ಯಕ್ರಮಗಳ ಬ್ಯಾನರ್‌ಗಳಿಗೆ ಅವಕಾಶ ನೀಡಬಾರದು, ಅಥವಾ ಅದಕ್ಕೆ ಬೇಕಾದ ಸೂಕ್ತ ಎಚ್ಚರಿಕೆಯನ್ನು ಇಲಾಖೆಯೇ ನೀಡಬೇಕು. ಒಂದು ವೇಳೆ ಸಮಸ್ಯೆಯಾಗುತ್ತದೆ ಎಂದಾದರೆ ಮೆರವಣಿಗೆ, ಜಾಥಾಗಳಿಗೆ , ಬ್ಯಾನರ್‌ಗಳಿಗೆ ಅವಕಾಶವನ್ನೇ ನೀಡಬಾರದು. ಇದೆಲ್ಲಾ ಅಗತ್ಯವಿದ್ದೂ, ಅನುಮತಿ ನೀಡಿ ಸಮಾಜದಲ್ಲಿ ಮತ್ತಷ್ಟು ವಿವಾದಗಳನ್ನು, ಸಮಸ್ಯೆಗಳನ್ನು ಸೃಷ್ಟಿಸುವುದು ಈಚೆಗೆ ಹೆಚ್ಚಾಗುತ್ತಿದೆ.

ಜನರ ಮತಗಳಿಂದ ಗೆದ್ದಿರುವ ಪ್ರತಿನಿಧಿಗಳು ಇಂತಹ ಸಮಸ್ಯೆಗಳು ಬಂದಾಗ ಅಧಿಕಾರಿಗಳ ಮೇಲೆಯೇ ಸಮಸ್ಯೆಯನ್ನು ವರ್ಗಾಯಿಸಿ ಸುಮ್ಮನಿರುವುದು ಕೂಡಾ ಕಂಡುಬಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಜನಪ್ರತಿನಿಧಿಗಳು ಸಾಮಾಜಿಕ ಹಿತದೃಷ್ಟಿಯಿಂದ ಮಧ್ಯಪ್ರವೇಶಿಸಿ ಇಂತಹ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವುದು ಸರಿಯಲ್ಲ. ಇಲಾಖೆಗಳಿಗೆ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ, ಕಾನೂನು ಪಾಲನೆ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಹೀಗಾಗಿ ಜನಪ್ರತಿನಿಧಿಗಳ ಪಾತ್ರವೂ ಇಲ್ಲಿ ಮುಖ್ಯವಾಗುತ್ತದೆ. ಎಲ್ಲದಕ್ಕೂ ಮೌನವಾಗಿರುವುದು ಜನಪ್ರತಿನಿಧಿಗಳಾದವರಿಗೂ ಅಗೌರವವೇ ಆಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

4 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

5 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

5 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

6 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

6 hours ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

6 hours ago