Advertisement
ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಹೇಗೆ ? | ಜನಪ್ರತಿನಿಧಿಗಳೇ ಮೌನವಾದರೆ ಹೇಗೆ..? | ಬ್ಯಾನರ್‌ ಜಗಳ ಹೆಚ್ಚಾಗುವ ಮೊದಲು ಇಲಾಖೆಗಳು-ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಬುದ್ದಿವಂತ ಜನಪ್ರತಿನಿಧಿಗಳು ಇದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿಗಳೂ ಇದ್ದಾರೆ. ಆದರೆ ಈಚೆಗೆ ಶಾಂತಿ ಸುವ್ಯವಸ್ಥೆ ಕಡೆಗೆ ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯಕತೆ ಇದೆ. ಈಗ ಅಧಿಕಾರಿಗಳು , ಪೊಲೀಸ್‌ ಇಲಾಖೆಯ ಅಧಿಕಾರಿಗಳು ಅಸಹಾಯಕತೆಯನ್ನು ವ್ಯಕ್ತಪಡಿಸುವುದು ಈಚೆಗೆ ಕೆಲವು ಪ್ರಕರಣಗಳಲ್ಲಿ ಕಂಡುಬಂದಿದೆ.

ಓಟಿನ ರಾಜಕಾರಣವನ್ನು ಎಲ್ಲಾ ಪಕ್ಷಗಳು ಈಗ ಬಿಟ್ಟು, ಶಾಂತಿ, ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ಸ್ಥಿತಿ ಬಂದಿದೆ. ಸುಳ್ಯದಲ್ಲಿ ಮಂಗಳವಾರ ಕಾರ್ಯಕ್ರಮ ಆಯೋಜನೆಯಾಗಿತ್ತು. ಇದೇ ವೇಳೆ ಬ್ಯಾನರ್‌ ತೆರವು-ಅಳವಡಿಕೆ ವಿವಾದವೊಂದು ಇಡೀ ದಿನ ಸದ್ದು ಮಾಡಿತು. ನಗರ ಪಂಚಾಯತ್‌ ಅಧಿಕಾರಿಗಳು ಬ್ಯಾನರ್‌ ತೆರವು ಮಾಡಿಸಿದರು, ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಬ್ಯಾನರ್‌ ತೆರವು ಮಾಡಲು ಹೇಳಿತ್ತು. ನಗರ ಪಂಚಾಯತ್‌ ತೆರವು ಮಾಡಿತು..!. ಇಷ್ಟೇ ಘಟನೆ. ಆದರೆ ಇಲ್ಲಿ ಯಾವ ಇಲಾಖೆಗಳೂ ಅಧಿಕೃತವಾದ ಪತ್ರದ ವ್ಯವಹಾರ ಮಾಡಲಿಲ್ಲ. ಇಲ್ಲಿ ಇದ್ದ ಉದ್ದೇಶ, ಶಾಂತಿ ಸುವ್ಯವಸ್ಥೆ.

ಬೃಹತ್‌ ಸಭೆ-ಜಾಥಾದ ನಡುವೆ ಒಂದು ಬ್ಯಾನರ್‌ ಮೇಲೆ ಕಲ್ಲು ಬಿದ್ದರೂ, ಸಣ್ಣದಾದ ಸಮಸ್ಯೆ ಬ್ಯಾನರ್‌ ಮೇಲಾದರೂ ಶಾಂತಿ ಕದಡುತ್ತದೆ.  ಈ ಹಿನ್ನೆಲೆಯಲ್ಲಿ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು, ಕೈಗೊಳ್ಳಲೇಬೇಕಾದ ಸಂಗತಿ ಕೂಡಾ. ವಾರಗಳ ಹಿಂದೆಯೂ ಸುಳ್ಯದಲ್ಲಿ ಅದೇ ಮಾದರಿಯಲ್ಲಿ ಬ್ಯಾನರ್‌ ಸಮಸ್ಯೆಯಾಗಿತ್ತು, ಆಗ ಜನಪ್ರತಿನಿಧಿಯೊಬ್ಬರು ಈ ಸಮಸ್ಯೆಯನ್ನು ಬಗೆಹರಿಸಿದ್ದರು, ಅಂತಹ ಮಾದರಿ ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಎಲ್ಲರೂ ಅನುಮತಿ ಪಡೆದೇ ಬ್ಯಾನರ್‌ ಅಳವಡಿಕೆ ಮಾಡುತ್ತಾರೆ. ನಗರ ಪಂಚಾಯತ್‌ ವಿಧಿಸುವ ದರವನ್ನು ಪಾವತಿ ಮಾಡಿಯೇ ಬ್ಯಾನರ್‌ ಅಳವಡಿಕೆ ಮಾಡಲಾಗುತ್ತದೆ.

ಹೀಗಿರುವಾಗ ಕಾನೂನು ಸುವ್ಯವಸ್ಥೆ, ಶಾಂತಿ ಎಂದೆಲ್ಲಾ ಕಾರ್ಯಕ್ರಮದ ನಡುವೆ ಬ್ಯಾನರ್‌ ತೆಗೆಸುವ ಪ್ರಕ್ರಿಯೆಯೂ ಆಭಾಸವಾಗುತ್ತದೆ, ಸಮಸ್ಯೆಯಾಗುತ್ತದೆ.ಸುಳ್ಯದಲ್ಲಿ ಬುಧವಾರ ಸಮಸ್ಯೆ ಆಗಿರುವುದು ಕೂಡಾ ಅದೇ.  ಒಂದೋ ಎರಡೂ ಕಾರ್ಯಕ್ರಮಗಳ ಬ್ಯಾನರ್‌ಗಳಿಗೆ ಅವಕಾಶ ನೀಡಬಾರದು, ಅಥವಾ ಅದಕ್ಕೆ ಬೇಕಾದ ಸೂಕ್ತ ಎಚ್ಚರಿಕೆಯನ್ನು ಇಲಾಖೆಯೇ ನೀಡಬೇಕು. ಒಂದು ವೇಳೆ ಸಮಸ್ಯೆಯಾಗುತ್ತದೆ ಎಂದಾದರೆ ಮೆರವಣಿಗೆ, ಜಾಥಾಗಳಿಗೆ , ಬ್ಯಾನರ್‌ಗಳಿಗೆ ಅವಕಾಶವನ್ನೇ ನೀಡಬಾರದು. ಇದೆಲ್ಲಾ ಅಗತ್ಯವಿದ್ದೂ, ಅನುಮತಿ ನೀಡಿ ಸಮಾಜದಲ್ಲಿ ಮತ್ತಷ್ಟು ವಿವಾದಗಳನ್ನು, ಸಮಸ್ಯೆಗಳನ್ನು ಸೃಷ್ಟಿಸುವುದು ಈಚೆಗೆ ಹೆಚ್ಚಾಗುತ್ತಿದೆ.

ಜನರ ಮತಗಳಿಂದ ಗೆದ್ದಿರುವ ಪ್ರತಿನಿಧಿಗಳು ಇಂತಹ ಸಮಸ್ಯೆಗಳು ಬಂದಾಗ ಅಧಿಕಾರಿಗಳ ಮೇಲೆಯೇ ಸಮಸ್ಯೆಯನ್ನು ವರ್ಗಾಯಿಸಿ ಸುಮ್ಮನಿರುವುದು ಕೂಡಾ ಕಂಡುಬಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಜನಪ್ರತಿನಿಧಿಗಳು ಸಾಮಾಜಿಕ ಹಿತದೃಷ್ಟಿಯಿಂದ ಮಧ್ಯಪ್ರವೇಶಿಸಿ ಇಂತಹ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವುದು ಸರಿಯಲ್ಲ. ಇಲಾಖೆಗಳಿಗೆ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ, ಕಾನೂನು ಪಾಲನೆ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಹೀಗಾಗಿ ಜನಪ್ರತಿನಿಧಿಗಳ ಪಾತ್ರವೂ ಇಲ್ಲಿ ಮುಖ್ಯವಾಗುತ್ತದೆ. ಎಲ್ಲದಕ್ಕೂ ಮೌನವಾಗಿರುವುದು ಜನಪ್ರತಿನಿಧಿಗಳಾದವರಿಗೂ ಅಗೌರವವೇ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago