ಬಿಜೆಪಿ ಭಿನ್ನಮತ ಸ್ಫೋಟ- ನ.7 ರವರೆಗೆ ಕಾಯುವಂತೆ ಅತೃಪ್ತ ಗುಂಪಿಗೆ ನಳಿನ್ ಸೂಚನೆ

November 5, 2020
2:49 PM
ಸುಳ್ಯ ಮಂಡಲ ಬಿಜೆಪಿಯಲ್ಲಿ ಭಿನ್ನಮತ ಮತ್ತು ಗುಂಪುಗಾರಿಕೆ ತೀವ್ರಗೊಂಡಿದ್ದು ಸಮಾವೇಶ ನಡೆಸಿ ಶಕ್ತಿಪ್ರದರ್ಶನಕ್ಕೆ ಅತೃಪ್ತರ ಗುಂಪು ನಿರ್ಧರಿಸಿದೆ. ಜಿಲ್ಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ನ.7ರವರೆಗೆ ಯಾವುದೇ ಚಟುವಟಿಕೆ ನಡೆಸದಂತೆ ಮತ್ತು ಆ ಬಳಿಕ ಚರ್ಚೆಗೆ ಕರೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅತೃಪ್ತ ಗುಂಪಿಗೆ ಸೂಚನೆ ನೀಡಿದ್ದಾರೆ.

ಸುಳ್ಯ ಬಿಜೆಪಿಯಲ್ಲಿ ಸ್ಪಷ್ಟವಾಗಿ ಎರಡು ಬಣ ಉಂಟಾಗಿದ್ದು ಪಕ್ಷದ ಚಟುವಟಿಕೆಗಳಿಗೆ ತಮ್ಮನ್ನು ಕರೆಯದೆ ತಮ್ಮನ್ನು ಕಡೆಗಣಿಸುತ್ತಿರುವುದಾಗಿ ಎಸ್.ಎನ್.ಮನ್ಮಥ, ಎನ್.ಎ.ರಾಮಚಂದ್ರ ಮತ್ತಿತರ ನೇತೃತ್ವದಲ್ಲಿ ಬಿಜೆಪಿಯ 25ಕ್ಕೂ ಹೆಚ್ಚು ಮಂದಿ ಹಿರಿಯ ನಾಯಕರು ಸಭೆ ನಡೆಸಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಅವರಿಗೆ ದೂರು ನೀಡಿದ್ದರು. ಬಳಿಕ ಇವರನ್ನು ಕರೆಸಿ ಜಿಲ್ಲಾಧ್ಯಕ್ಷರು ಚರ್ಚೆ ನಡೆಸಿದ್ದರು. ಆದರೆ ಭೇಟಿ ಫಲಪ್ರದವಾಗದ ಹಿನ್ನಲೆಯಲ್ಲಿ ಅತೃಪ್ತರು ಸುದ್ದಿಗೋಷ್ಠಿ ನಡೆಸಿ ಅಸಮಾಧಾನವನ್ನು ಸಾರ್ವಜನಿಕವಾಗಿ ತೋರ್ಪಡಿಸಲು ಮತ್ತು ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಲು ನಿರ್ಧರಿಸಿದ್ದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನ.7ರ ಬಳಿಕ ಇವರ ಜೊತೆ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಿನಾಮೆಗೆ ಪಟ್ಟು:

ಸುಳ್ಯ ಬಿಜೆಪಿ ಮಂಡಲ‌ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಕೂಡಲೇ ರಾಜಿನಾಮೆ ನೀಡಬೇಕು ಅಥವಾ ಅವರನ್ನು ಕೂಡಲೇ ಬದಲಾವಣೆ ಮಾಡಬೇಕು, ಎನ್.ಎ.ರಾಮಚಂದ್ರ, ಎಸ್.ಎನ್.ಮನ್ಮಥ ಅವರನ್ನು ಬಿಜೆಪಿ ಕೋರ್ ಕಮಿಟಿಗೆ ಸೇರಿಸಬೇಕು ಎಂಬುದು ಅತೃಪ್ತರ ಗುಂಪಿನ ಪ್ರಮುಖ ಬೇಡಿಕೆ. ಮಂಡಲ ಕೋರ್ ಕಮಿಟಿಯಲ್ಲಿ ಕೆಲವೇ‌ ಕೆಲವು ಮಂದಿ ಇದ್ದು ಅಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲರ ಮೇಲೆ ಹೇರಲಾಗುತ್ತಿದೆ.

ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಏಕಪಕ್ಷೀಯ ತೀರ್ಮಾನ ಕೈಗೊಂಡು ಪ್ರಮುಖ ನೇತಾರರನ್ನು ಮತ್ತು ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಅಲ್ಲದೆ ಆರ್ ಎಸ್ ಎಸ್ ನ ಕೆಲವು ಪ್ರಮುಖರು ಪಕ್ಷದ ಚಟುವಟಿಕೆಯಲ್ಲಿ ಮಧ್ಯಪ್ರವೇಶಿಸಿ ಪಕ್ಷದ ಪ್ರಮುಖರನ್ನು ಕಡೆಗಣಿಸುತ್ತಿದ್ದಾರೆ ಎಂಬುದು ಅತೃಪ್ತರ ಗುಂಪು ಜಿಲ್ಲಾ ಪ್ರಮುಖರ ಮುಂದೆ ಇರಿಸಿದ ಪ್ರಮುಖ ಆರೋಪ ಮತ್ತು ಬೇಡಿಕೆಯಾಗಿದೆ. ಆದರೆ ಈ ಬೇಡಿಕೆಗಳಿಗೆ ಜಿಲ್ಲಾ ನೇತೃತ್ವ ಸೂಕ್ತವಾದ ಉತ್ತರ ನೀಡದ ಕಾರಣ ಚರ್ಚೆ ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಬಂಡಾಯವಾಗಿ ಸ್ಪ್ರರ್ಧಿಸಿ ಗೆದ್ದ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನ ತ್ಯಜಿಸುವಂತೆ ಜಿಲ್ಲಾ ಪ್ರಮುಖರು ಮುಂದಿಸಿದ ಸಲಹೆಯನ್ನು ಅತೃಪ್ತರ ಗುಂಪು ನಿರಾಕರಿಸಿದೆ.

8-10 ಗ್ರಾಮಗಳಲ್ಲಿ ಬಲ ಪ್ರದರ್ಶನಕ್ಕೆ ನಿರ್ಧಾರ:

ತಮ್ಮ ಬೇಡಿಕೆಗಳಿಗೆ ಪಕ್ಷದ ಜಿಲ್ಲಾ ನೇತೃತ್ವ ಸ್ಪಷ್ಟವಾದ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 8-10 ಗ್ರಾಮಗಳಲ್ಲಿ ಬಂಡಾಯ ಸ್ಪರ್ಧೆ ನೀಡಿ ಬಲ ಪ್ರದರ್ಶನಕ್ಕೆ ಅತೃಪ್ತರ ಗುಂಪು ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಎಸ್ ಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಏಳು ಮಂದಿ ಅಡ್ಡ ಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿತ್ತು. ಇದರಿಂದ ಸುಳ್ಯ ಬಿಜೆಪಿಯಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿತ್ತು. ಯಾರು ಅಡ್ಡಮತದಾನ ಮಾಡಿದ್ದಾರೆ ಎಂದು ಪತ್ತೆ ಹಚ್ಚಲು ವಿಫಲವಾದ ಪಕ್ಷ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ 17 ಮಂದಿಯ ಮೇಲೆ ಕ್ರಮಕ್ಕೆ ಮುಂದಾಗಿ ಅವರ ರಾಜಿನಾಮೆಯನ್ನು ಕೇಳಿತ್ತು. ಆದರೆ ಹಲವು ಮಂದಿ ರಾಜಿನಾಮೆ ನೀಡಲಿಲ್ಲ. ಬಳಿಕ ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧೆ ನಡೆಸಿತ್ತು. ಅರಂತೋಡು, ಐವರ್ನಾಡು ಮತ್ತಿತರ ಕಡೆಗಳಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಿಗೆ ಹೀನಾಯ ಸೋಲಾಗಿತ್ತು. ತಮ್ಮ ಬೇಡೀಕೆಗಳು ಈಡೇರದೆ ಇದ್ದರೆ ಇದೇ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಬಂಡಾಯ ಸ್ಪರ್ಧೆಗೆ ಅತೃಪ್ತರ ಗುಂಪು ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror