Advertisement
ಸುದ್ದಿಗಳು

ಸುಳ್ಯ ತಾಲೂಕು ವಿಪ್ರ ಸಮಾವೇಶ | ಧಾರ್ಮಿಕ-ವೈಚಾರಿಕ ಚಿಂತನೆಗಳು ಆರಂಭ |

Share

ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ತಾಲೂಕು ವಿಪ್ರ ಸಮಾವೇಶವು ಸುಳ್ಯ  ತಾಲೂಕಿನ ಕಲ್ಮಡ್ಕದ ಶ್ರೀರಾಮ ಭಜನಾ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಿತು. ಎರಡು ದಿನಗಳ ಸಮಾವೇಶದಲ್ಲಿ ಬ್ರಾಹ್ಮಣರ ಆಚರಣೆ ಹಾಗೂ ವೈಚಾರಿಕ ದೃಷ್ಟಿಕೋನದ ಚಿಂತನೆಗಳು ನಡೆದವು.

ಕಳೆದ ಕೆಲವು ಸಮಯಗಳಿಂದ ಸುಳ್ಯ ತಾಲೂಕು ವಿಪ್ರ ಸಮಾವೇಶ ನಡೆಯುತ್ತಿದೆ. ಈ ಬಾರಿಯ ಸಮಾವೇಶವು ಹೆಚ್ಚು ಗಮನ ಸೆಳೆಯಿತು. ವಿವಿಧ ಗೋಷ್ಠಿಗಳ ಮೂಲಕ ಚಿಂತನೆಗಳು ನಡೆದವು. ಬ್ರಾಹ್ಮಣರ ವಲಸೆ ಬಗ್ಗೆ ಡಾ.ಎಂ ಪ್ರಭಾಕರ ಜೋಷಿ ಮಾತನಾಡಿದರೆ, ಸಾಹಿತ್ಯದಲ್ಲಿ ಸುಳ್ಯ ಬ್ರಾಹ್ಮಣರ ಕೊಡುಗೆಗಳ ಬಗ್ಗೆ ದೀಪಾ ಫಡ್ಕೆ ಅವರು ಮಾತನಾಡಿದರು. ವೈದ್ಯಕೀಯ ಸೇವೆಯ ಬಗ್ಗೆ ಡಾ.ಕಿಶನ್‌ ರಾವ್‌ ಬಾಳಿಲ ಮಾತನಾಡಿದರು.

ಬ್ರಾಹ್ಮಣರಲ್ಲಿ ಆಚರಣೆಯ ಬಗ್ಗೆ ಮಾತನಾಡಿದ ಡಾ.ವೀಣಾ ಫಾಲಚಂದ್ರ, ಯಾವುದೇ ಕೆಲಸಗಳಲ್ಲಿ ಬ್ರಾಹ್ಮಣರು ತಮ್ಮ ತನವನ್ನು ಉಳಿಸಿಕೊಳ್ಳಬೇಕು. ಒಟ್ಟು 8 ಗುಣಗಳಲ್ಲಿ ಬ್ರಾಹ್ಮಣರ ಬದುಕು ಇರುತ್ತದೆ. ಬಾಹ್ಯ ಕೆಲಸಗಳಲ್ಲಿ ಇದು ಕೆಲಸ ಮಾಡುತ್ತದೆ.  ಬ್ರಾಹ್ಮಣರ ಮೂಲ ಸತ್ವವಾದ ಪರಿಗ್ರಹ ಸೇರಿದಂತೆ ಎಲ್ಲಾ ಅಗತ್ಯ ಇಲ್ಲದ ಯಾವುದನ್ನೂ ಸ್ವೀಕರಿಸಬಾರದು. ಈ ಎಲ್ಲಾ ಕಾರಣದಿಂದಲೇ ಬ್ರಾಹ್ಮಣರು ಎಲ್ಲಾ ಕ್ಷೇತ್ರದಲ್ಲೂ ತನ್ನದೇ ಆದ ಛಾಪನ್ನು ಮೂಡಿಸುತ್ತಾರೆ ಎಂದರು.

ಶಿಕ್ಷಕನಾಗಿ ಬ್ರಾಹ್ಮಣರ ಕೊಡುಗೆಯ ಬಗ್ಗೆ ಮಾತನಾಡಿದ ಪ್ರಕಾಶ್‌ ಮೂಡಿತ್ತಾಯ, ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ಅಂತಹ ಶಿಕ್ಷಕರಾಗಿ ಬ್ರಾಹ್ಮಣರು ಅತ್ಯಂತ ದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ. ಉತ್ತಮ ಶಿಕ್ಷಕರ ಪಟ್ಟಿ ಮಾಡಲು ಹೊರಟರೆ ಅಂತಹ ಪಟ್ಟಿಯೇ ದೊಡ್ಡದಾದೀತು ಎಂದರು.

ಸಮಾಜದಲ್ಲಿ ಯುವ ಬ್ರಾಹ್ಮಣರ ಕೊಡುಗೆಗಳ ಬಗ್ಗೆಯೂ ಗೋಷ್ಠಿ ನಡೆಯಿತು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಸುಬ್ರಾಯ ವಿ ವಹಿಸಿದ್ದರು. ಕೃಷ್ಣ ರಾವ್‌, ವಿ ಪಿ ಹೊಳ್ಳ, ಸುಧಾಕರ ನೆಟ್ಟಾರು ಭಾಗವಹಿಸಿದರು.  ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್‌ ಭಾರಧ್ವಾಜ್‌ ಉದ್ಘಾಟಿಸಿದರು. ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಅವನಿ ಕೋಡಿಬೈಲು ಅವರಿಂದ ನೃತ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

19 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago