ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ತಾಲೂಕು ವಿಪ್ರ ಸಮಾವೇಶವು ಸುಳ್ಯ ತಾಲೂಕಿನ ಕಲ್ಮಡ್ಕದ ಶ್ರೀರಾಮ ಭಜನಾ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಿತು. ಎರಡು ದಿನಗಳ ಸಮಾವೇಶದಲ್ಲಿ ಬ್ರಾಹ್ಮಣರ ಆಚರಣೆ ಹಾಗೂ ವೈಚಾರಿಕ ದೃಷ್ಟಿಕೋನದ ಚಿಂತನೆಗಳು ನಡೆದವು.
ಕಳೆದ ಕೆಲವು ಸಮಯಗಳಿಂದ ಸುಳ್ಯ ತಾಲೂಕು ವಿಪ್ರ ಸಮಾವೇಶ ನಡೆಯುತ್ತಿದೆ. ಈ ಬಾರಿಯ ಸಮಾವೇಶವು ಹೆಚ್ಚು ಗಮನ ಸೆಳೆಯಿತು. ವಿವಿಧ ಗೋಷ್ಠಿಗಳ ಮೂಲಕ ಚಿಂತನೆಗಳು ನಡೆದವು. ಬ್ರಾಹ್ಮಣರ ವಲಸೆ ಬಗ್ಗೆ ಡಾ.ಎಂ ಪ್ರಭಾಕರ ಜೋಷಿ ಮಾತನಾಡಿದರೆ, ಸಾಹಿತ್ಯದಲ್ಲಿ ಸುಳ್ಯ ಬ್ರಾಹ್ಮಣರ ಕೊಡುಗೆಗಳ ಬಗ್ಗೆ ದೀಪಾ ಫಡ್ಕೆ ಅವರು ಮಾತನಾಡಿದರು. ವೈದ್ಯಕೀಯ ಸೇವೆಯ ಬಗ್ಗೆ ಡಾ.ಕಿಶನ್ ರಾವ್ ಬಾಳಿಲ ಮಾತನಾಡಿದರು.
ಬ್ರಾಹ್ಮಣರಲ್ಲಿ ಆಚರಣೆಯ ಬಗ್ಗೆ ಮಾತನಾಡಿದ ಡಾ.ವೀಣಾ ಫಾಲಚಂದ್ರ, ಯಾವುದೇ ಕೆಲಸಗಳಲ್ಲಿ ಬ್ರಾಹ್ಮಣರು ತಮ್ಮ ತನವನ್ನು ಉಳಿಸಿಕೊಳ್ಳಬೇಕು. ಒಟ್ಟು 8 ಗುಣಗಳಲ್ಲಿ ಬ್ರಾಹ್ಮಣರ ಬದುಕು ಇರುತ್ತದೆ. ಬಾಹ್ಯ ಕೆಲಸಗಳಲ್ಲಿ ಇದು ಕೆಲಸ ಮಾಡುತ್ತದೆ. ಬ್ರಾಹ್ಮಣರ ಮೂಲ ಸತ್ವವಾದ ಪರಿಗ್ರಹ ಸೇರಿದಂತೆ ಎಲ್ಲಾ ಅಗತ್ಯ ಇಲ್ಲದ ಯಾವುದನ್ನೂ ಸ್ವೀಕರಿಸಬಾರದು. ಈ ಎಲ್ಲಾ ಕಾರಣದಿಂದಲೇ ಬ್ರಾಹ್ಮಣರು ಎಲ್ಲಾ ಕ್ಷೇತ್ರದಲ್ಲೂ ತನ್ನದೇ ಆದ ಛಾಪನ್ನು ಮೂಡಿಸುತ್ತಾರೆ ಎಂದರು.
ಶಿಕ್ಷಕನಾಗಿ ಬ್ರಾಹ್ಮಣರ ಕೊಡುಗೆಯ ಬಗ್ಗೆ ಮಾತನಾಡಿದ ಪ್ರಕಾಶ್ ಮೂಡಿತ್ತಾಯ, ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ಅಂತಹ ಶಿಕ್ಷಕರಾಗಿ ಬ್ರಾಹ್ಮಣರು ಅತ್ಯಂತ ದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ. ಉತ್ತಮ ಶಿಕ್ಷಕರ ಪಟ್ಟಿ ಮಾಡಲು ಹೊರಟರೆ ಅಂತಹ ಪಟ್ಟಿಯೇ ದೊಡ್ಡದಾದೀತು ಎಂದರು.
ಸಮಾಜದಲ್ಲಿ ಯುವ ಬ್ರಾಹ್ಮಣರ ಕೊಡುಗೆಗಳ ಬಗ್ಗೆಯೂ ಗೋಷ್ಠಿ ನಡೆಯಿತು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಸುಬ್ರಾಯ ವಿ ವಹಿಸಿದ್ದರು. ಕೃಷ್ಣ ರಾವ್, ವಿ ಪಿ ಹೊಳ್ಳ, ಸುಧಾಕರ ನೆಟ್ಟಾರು ಭಾಗವಹಿಸಿದರು. ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಾಜ್ ಉದ್ಘಾಟಿಸಿದರು. ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…