Advertisement
ಸುದ್ದಿಗಳು

ಸುಳ್ಯ ತಾಲೂಕು ವಿಪ್ರ ಸಮಾವೇಶ | ಧಾರ್ಮಿಕ-ವೈಚಾರಿಕ ಚಿಂತನೆಗಳು ಆರಂಭ |

Share

ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ತಾಲೂಕು ವಿಪ್ರ ಸಮಾವೇಶವು ಸುಳ್ಯ  ತಾಲೂಕಿನ ಕಲ್ಮಡ್ಕದ ಶ್ರೀರಾಮ ಭಜನಾ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಿತು. ಎರಡು ದಿನಗಳ ಸಮಾವೇಶದಲ್ಲಿ ಬ್ರಾಹ್ಮಣರ ಆಚರಣೆ ಹಾಗೂ ವೈಚಾರಿಕ ದೃಷ್ಟಿಕೋನದ ಚಿಂತನೆಗಳು ನಡೆದವು.

ಕಳೆದ ಕೆಲವು ಸಮಯಗಳಿಂದ ಸುಳ್ಯ ತಾಲೂಕು ವಿಪ್ರ ಸಮಾವೇಶ ನಡೆಯುತ್ತಿದೆ. ಈ ಬಾರಿಯ ಸಮಾವೇಶವು ಹೆಚ್ಚು ಗಮನ ಸೆಳೆಯಿತು. ವಿವಿಧ ಗೋಷ್ಠಿಗಳ ಮೂಲಕ ಚಿಂತನೆಗಳು ನಡೆದವು. ಬ್ರಾಹ್ಮಣರ ವಲಸೆ ಬಗ್ಗೆ ಡಾ.ಎಂ ಪ್ರಭಾಕರ ಜೋಷಿ ಮಾತನಾಡಿದರೆ, ಸಾಹಿತ್ಯದಲ್ಲಿ ಸುಳ್ಯ ಬ್ರಾಹ್ಮಣರ ಕೊಡುಗೆಗಳ ಬಗ್ಗೆ ದೀಪಾ ಫಡ್ಕೆ ಅವರು ಮಾತನಾಡಿದರು. ವೈದ್ಯಕೀಯ ಸೇವೆಯ ಬಗ್ಗೆ ಡಾ.ಕಿಶನ್‌ ರಾವ್‌ ಬಾಳಿಲ ಮಾತನಾಡಿದರು.

Advertisement

ಬ್ರಾಹ್ಮಣರಲ್ಲಿ ಆಚರಣೆಯ ಬಗ್ಗೆ ಮಾತನಾಡಿದ ಡಾ.ವೀಣಾ ಫಾಲಚಂದ್ರ, ಯಾವುದೇ ಕೆಲಸಗಳಲ್ಲಿ ಬ್ರಾಹ್ಮಣರು ತಮ್ಮ ತನವನ್ನು ಉಳಿಸಿಕೊಳ್ಳಬೇಕು. ಒಟ್ಟು 8 ಗುಣಗಳಲ್ಲಿ ಬ್ರಾಹ್ಮಣರ ಬದುಕು ಇರುತ್ತದೆ. ಬಾಹ್ಯ ಕೆಲಸಗಳಲ್ಲಿ ಇದು ಕೆಲಸ ಮಾಡುತ್ತದೆ.  ಬ್ರಾಹ್ಮಣರ ಮೂಲ ಸತ್ವವಾದ ಪರಿಗ್ರಹ ಸೇರಿದಂತೆ ಎಲ್ಲಾ ಅಗತ್ಯ ಇಲ್ಲದ ಯಾವುದನ್ನೂ ಸ್ವೀಕರಿಸಬಾರದು. ಈ ಎಲ್ಲಾ ಕಾರಣದಿಂದಲೇ ಬ್ರಾಹ್ಮಣರು ಎಲ್ಲಾ ಕ್ಷೇತ್ರದಲ್ಲೂ ತನ್ನದೇ ಆದ ಛಾಪನ್ನು ಮೂಡಿಸುತ್ತಾರೆ ಎಂದರು.

ಶಿಕ್ಷಕನಾಗಿ ಬ್ರಾಹ್ಮಣರ ಕೊಡುಗೆಯ ಬಗ್ಗೆ ಮಾತನಾಡಿದ ಪ್ರಕಾಶ್‌ ಮೂಡಿತ್ತಾಯ, ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ಅಂತಹ ಶಿಕ್ಷಕರಾಗಿ ಬ್ರಾಹ್ಮಣರು ಅತ್ಯಂತ ದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ. ಉತ್ತಮ ಶಿಕ್ಷಕರ ಪಟ್ಟಿ ಮಾಡಲು ಹೊರಟರೆ ಅಂತಹ ಪಟ್ಟಿಯೇ ದೊಡ್ಡದಾದೀತು ಎಂದರು.

Advertisement

ಸಮಾಜದಲ್ಲಿ ಯುವ ಬ್ರಾಹ್ಮಣರ ಕೊಡುಗೆಗಳ ಬಗ್ಗೆಯೂ ಗೋಷ್ಠಿ ನಡೆಯಿತು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಸುಬ್ರಾಯ ವಿ ವಹಿಸಿದ್ದರು. ಕೃಷ್ಣ ರಾವ್‌, ವಿ ಪಿ ಹೊಳ್ಳ, ಸುಧಾಕರ ನೆಟ್ಟಾರು ಭಾಗವಹಿಸಿದರು.  ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್‌ ಭಾರಧ್ವಾಜ್‌ ಉದ್ಘಾಟಿಸಿದರು. ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

Advertisement
ಅವನಿ ಕೋಡಿಬೈಲು ಅವರಿಂದ ನೃತ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

4 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

6 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

7 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

7 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago