ಸುಳ್ಯದಲ್ಲಿ ಇದೀಗ ಕಾಂಗ್ರೆಸ್ ಉಚ್ಛಾಟಿತ ನಾಯಕರುಗಳ ಸಭೆ ಕಾಂಗ್ರೆಸ್ ಮುಖಂಡ ಮಹೇಶ್ ಕರಿಕಳ ಅವರ ಮನೆಯಲ್ಲಿ ನಡೆದಿದೆ. ಎಲ್ಲಾ ನಾಯಕರು ಒಟ್ಟಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನೈಜ ವಿಚಾರ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.
ಈ ಸಂದರ್ಭ ಹಲವು ಅಭಿಪ್ರಾಯಗಳನ್ನು ನಾಯಕರು ವ್ಯಕ್ತಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆ ಈ ಹಿಂದಿನ ಎಲ್ಲಾ ಚುನಾವಣೆಯ ಸಂದರ್ಭವೂ ಆಗಿದೆ. ಈ ಹಿಂದೆ ಡಾ.ರಘು ಅವರು ಗೆಲ್ಲುವ ಸಂದರ್ಭ ನಡೆದ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಯಾವ ಕ್ರಮವಾಗಿದೆ? ಎಂಬ ಪ್ರಶ್ನೆಯೂ ವ್ಯಕ್ತವಾಯಿತು.
ಈ ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆದಿರಲಿಲ್ಲ, ಬದಲಾಗಿ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತ ಆಯ್ಕೆ ಇದ್ದಿರುವ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು ಎನ್ನುವುದೇ ಬೇಡಿಕೆಯಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಅಭಿಯಾನ ನಡೆಸಬೇಕು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯೂ ಆಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.
ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಸಹಿತ ಪ್ರಮುಖರು ಇದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…